2019ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಆಗಿದ್ದ ಅರುಣ್ ಕುಮಾರ್ ಅವರಿಂದ ಚುನಾವಣಾ ಪ್ರಚಾರ ಸಾಮಾಗ್ರಿಗಳನ್ನು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರು ವಶಪಡಿಸಿಕೊಂಡಿದ್ದರು.ಬಳಿಕ ಈ ಕುರಿತು ಮೊಕದ್ದಮೆ ದಾಖಲಾಗಿತ್ತು. ಅನುಮತಿ ಪಡೆಯದೇ ಗೋಡೆಗಳ ಮೇಲೆ ಚುನಾವಣಾ ಘೋಷಣೆಗಳನ್ನು ಬರೆದಿದ್ದ ಆರೋಪದ ಮೇಲೂ ಮೊಕದ್ದಮೆ ದಾಖಲಿಸಲಾಗಿತ್ತು. ಈ ಮೊಕದ್ದಮೆಗಳ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗುವಂತೆ ಹಲವು ಬಾರಿಅವರಿಗೆ ಸಮನ್ಸ್ ನೀಡಲಾಗಿದ್ದರ ಹೊರತಾಗಿಯೂ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಬಳಿಕ ಅವರಿಗೆ ಜಾಮೀನುರಹಿತ ವಾರಂಟ್ ನೀಡಲಾಗಿತ್ತು ಎಂದು ಸರ್ಕಾರಿ ವಕೀಲೆ ನೀಲಿಮಾ ಸಕ್ಸೇನಾ ಅವರು ತಿಳಿಸಿದ್ದಾರೆ.