ಗೊಹಾನಾ (ಹರಿಯಾಣ): ಪ್ರತಿಕೂಲ ಹವಾಮಾನದ ಕಾರಣದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹರಿಯಾಣದ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರು ದೂರವಾಣಿ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದರು.
ಬಿರುಗಾಳಿ ಮತ್ತು ಮಳೆಯಾಗುವ ಸಾಧ್ಯತೆ ಇದ್ದ ಕಾರಣ ಶಾ ಅವರ ಹೆಲಿಕಾಪ್ಟರ್ ಹಾರಾಟಕ್ಕೆ ಅನುಮತಿ ಸಿಗಲಿಲ್ಲ. ಕಾರಿನಲ್ಲಿ ಬರಬೇಕೆಂದರೂ ಸಾಧ್ಯವಾಗಲಿಲ್ಲ. ಹೀಗಾಗಿ ಗೃಹ ಸಚಿವರು ರ್ಯಾಲಿಯಲ್ಲಿ ಭಾಗವಹಿಸುವುದಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ಲಾಲ್ ಕಟ್ಟರ್ ಹೇಳಿದ್ದಾರೆ.