<p><strong>ಪಣಜಿ: </strong>‘ಕರ್ನಾಟಕ ಮತ್ತು ಗೋವಾದಲ್ಲಿ ಬಿಜೆಪಿ ಸರ್ಕಾರವಿದ್ದು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆಯ ಮೂಲಕ ಮಹದಾಯಿ ವಿವಾದವನ್ನು ಪರಿಹರಿಸಬೇಕು’ ಎಂದು ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗಿರುವ ಶಂಕರಗೌಡ ಪಾಟೀಲ ಮಂಗಳವಾರ ಹೇಳಿದ್ದಾರೆ.</p>.<p>ಆಯುಷ್ ಸಚಿವಾಲಯಕ್ಕೆ ಸಂಬಂಧಿಸಿದ ವಿಚಾರದ ಚರ್ಚೆಗಾಗಿ, ಆಯುಷ್ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರನ್ನು ಭೇಟಿಯಾಗಲು ಗೋವಾಕ್ಕೆ ಭೇಟಿ ನೀಡಿದ ಶಂಕರಗೌಡ ಅವರು, ‘ನದಿ ನೀರು ಹಂಚಿಕೆಯಂತಹ ಸೂಕ್ಷ್ಮ ವಿಚಾರಗಳನ್ನು ಪರಿಹರಿಸುವಲ್ಲಿ ವಿರೋಧ ಪಕ್ಷಗಳು ಸಕಾರಾತ್ಮಕ ಪಾತ್ರ ವಹಿಸಬೇಕು’ ಎಂದಿದ್ದಾರೆ.</p>.<p>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬಲ್ಲರು, ಅದೇ ರೀತಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ಕೂಡ ಅನುಭವಿ. ಈ ಇಬ್ಬರೂ ಜೊತೆಯಾಗಿ ಚರ್ಚಿಸಿ ಎರಡೂ ರಾಜ್ಯಗಳ ಜನರ ಹಿತಾಸಕ್ತಿಯನ್ನು ಕಾಪಾಡಬೇಕು’ ಎಂದು ಹೇಳಿದ್ದಾರೆ.</p>.<p>‘ಅಗತ್ಯವಿದ್ದರೆ ಎರಡೂ ರಾಜ್ಯಗಳು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಸಲಹೆ ಪಡೆಯಬಹುದು. ವಿರೋಧ ಪಕ್ಷಗಳು ಇದರಲ್ಲಿ ರಾಜಕೀಯ ಮಾಡಬಾರದು’ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ: </strong>‘ಕರ್ನಾಟಕ ಮತ್ತು ಗೋವಾದಲ್ಲಿ ಬಿಜೆಪಿ ಸರ್ಕಾರವಿದ್ದು, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆಯ ಮೂಲಕ ಮಹದಾಯಿ ವಿವಾದವನ್ನು ಪರಿಹರಿಸಬೇಕು’ ಎಂದು ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗಿರುವ ಶಂಕರಗೌಡ ಪಾಟೀಲ ಮಂಗಳವಾರ ಹೇಳಿದ್ದಾರೆ.</p>.<p>ಆಯುಷ್ ಸಚಿವಾಲಯಕ್ಕೆ ಸಂಬಂಧಿಸಿದ ವಿಚಾರದ ಚರ್ಚೆಗಾಗಿ, ಆಯುಷ್ ಇಲಾಖೆಯ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರನ್ನು ಭೇಟಿಯಾಗಲು ಗೋವಾಕ್ಕೆ ಭೇಟಿ ನೀಡಿದ ಶಂಕರಗೌಡ ಅವರು, ‘ನದಿ ನೀರು ಹಂಚಿಕೆಯಂತಹ ಸೂಕ್ಷ್ಮ ವಿಚಾರಗಳನ್ನು ಪರಿಹರಿಸುವಲ್ಲಿ ವಿರೋಧ ಪಕ್ಷಗಳು ಸಕಾರಾತ್ಮಕ ಪಾತ್ರ ವಹಿಸಬೇಕು’ ಎಂದಿದ್ದಾರೆ.</p>.<p>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬಲ್ಲರು, ಅದೇ ರೀತಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ಕೂಡ ಅನುಭವಿ. ಈ ಇಬ್ಬರೂ ಜೊತೆಯಾಗಿ ಚರ್ಚಿಸಿ ಎರಡೂ ರಾಜ್ಯಗಳ ಜನರ ಹಿತಾಸಕ್ತಿಯನ್ನು ಕಾಪಾಡಬೇಕು’ ಎಂದು ಹೇಳಿದ್ದಾರೆ.</p>.<p>‘ಅಗತ್ಯವಿದ್ದರೆ ಎರಡೂ ರಾಜ್ಯಗಳು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಸಲಹೆ ಪಡೆಯಬಹುದು. ವಿರೋಧ ಪಕ್ಷಗಳು ಇದರಲ್ಲಿ ರಾಜಕೀಯ ಮಾಡಬಾರದು’ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>