<p><strong>ಮುಂಬೈ: </strong>‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿಯಾಗುವ ಸಾಧ್ಯತೆಗಳಿವೆ’ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ ತಿಳಿಸಿದ್ದಾರೆ.</p>.<p>ಈ ವೇಳೆ ಮಮತಾ ಬ್ಯಾನರ್ಜಿ ಅವರು 2024ರ ಲೋಕಸಭೆ ಚುನಾವಣೆಗಾಗಿ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸುವ ಮಾರ್ಗಗಳ ಬಗ್ಗೆ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.</p>.<p>ಮಮತಾ ಬ್ಯಾನರ್ಜಿ ಅವರು ಸೋಮವಾರ ನವದೆಹಲಿಗೆ ಭೇಟಿ ನೀಡಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅವರು ರಾಷ್ಟ್ರ ರಾಜಧಾನಿಗೆ ಬಂದಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ.</p>.<p>ಬಳಿಕ ಅವರು ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.</p>.<p>2024ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರೊಂದಿಗಿನ ಅವರ ಭೇಟಿಯು ಮಹತ್ವ ಪಡೆದಿದೆ.</p>.<p>ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪವಾರ್, ‘ಕಳೆದ ವಾರ ಮಮತಾ ಬ್ಯಾನರ್ಜಿ ಅವರು ನನಗೆ ಕರೆ ಮಾಡಿದ್ದರು. ಆಗ ದೆಹಲಿ ಭೇಟಿಯ ಬಗ್ಗೆ ತಿಳಿಸಿದರು. ಹಾಗಾಗಿ ಬುಧವಾರ ನಾವು ನವದೆಹಲಿಯಲ್ಲಿ ಭೇಟಿಯಾಗುವ ಸಾಧ್ಯತೆಗಳಿವೆ’ ಎಂದು ತಿಳಿಸಿದರು.</p>.<p>ಪೆಗಾಸಸ್ ಗೂಢಚರ್ಯೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ‘ಈ ಕುರಿತು ಏನೂ ಹೇಳುವುದಿಲ್ಲ. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತುತ್ತೇವೆ. ಅದುವೇ ಸರಿಯಾದ ಸ್ಥಳ’ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/democracy-has-capacity-to-reconcile-differences-bring-out-best-of-citizens-potential-president-ram-852145.html" target="_blank">ಭಿನ್ನಾಭಿಪ್ರಾಯವನ್ನು ಸಮನ್ವಯಗೊಳಿಸುವ ಸಾಮರ್ಥ್ಯ ಪ್ರಜಾಪ್ರಭುತ್ವಕ್ಕಿದೆ: ಕೋವಿಂದ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>‘ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿಯಾಗುವ ಸಾಧ್ಯತೆಗಳಿವೆ’ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ ತಿಳಿಸಿದ್ದಾರೆ.</p>.<p>ಈ ವೇಳೆ ಮಮತಾ ಬ್ಯಾನರ್ಜಿ ಅವರು 2024ರ ಲೋಕಸಭೆ ಚುನಾವಣೆಗಾಗಿ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸುವ ಮಾರ್ಗಗಳ ಬಗ್ಗೆ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.</p>.<p>ಮಮತಾ ಬ್ಯಾನರ್ಜಿ ಅವರು ಸೋಮವಾರ ನವದೆಹಲಿಗೆ ಭೇಟಿ ನೀಡಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅವರು ರಾಷ್ಟ್ರ ರಾಜಧಾನಿಗೆ ಬಂದಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ.</p>.<p>ಬಳಿಕ ಅವರು ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.</p>.<p>2024ರ ಲೋಕಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರೊಂದಿಗಿನ ಅವರ ಭೇಟಿಯು ಮಹತ್ವ ಪಡೆದಿದೆ.</p>.<p>ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪವಾರ್, ‘ಕಳೆದ ವಾರ ಮಮತಾ ಬ್ಯಾನರ್ಜಿ ಅವರು ನನಗೆ ಕರೆ ಮಾಡಿದ್ದರು. ಆಗ ದೆಹಲಿ ಭೇಟಿಯ ಬಗ್ಗೆ ತಿಳಿಸಿದರು. ಹಾಗಾಗಿ ಬುಧವಾರ ನಾವು ನವದೆಹಲಿಯಲ್ಲಿ ಭೇಟಿಯಾಗುವ ಸಾಧ್ಯತೆಗಳಿವೆ’ ಎಂದು ತಿಳಿಸಿದರು.</p>.<p>ಪೆಗಾಸಸ್ ಗೂಢಚರ್ಯೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ‘ಈ ಕುರಿತು ಏನೂ ಹೇಳುವುದಿಲ್ಲ. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತುತ್ತೇವೆ. ಅದುವೇ ಸರಿಯಾದ ಸ್ಥಳ’ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/democracy-has-capacity-to-reconcile-differences-bring-out-best-of-citizens-potential-president-ram-852145.html" target="_blank">ಭಿನ್ನಾಭಿಪ್ರಾಯವನ್ನು ಸಮನ್ವಯಗೊಳಿಸುವ ಸಾಮರ್ಥ್ಯ ಪ್ರಜಾಪ್ರಭುತ್ವಕ್ಕಿದೆ: ಕೋವಿಂದ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>