ನವದೆಹಲಿ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ ದೆಹಲಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಕ್ಕರೆಯ ಬೆಲೆ ಹೆಚ್ಚಳ ಮತ್ತು ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಎಥೆನಾಲ್ ಅನ್ನು ಬೆರೆಸುವಿಕೆ ಕುರಿತು ಚರ್ಚೆ ನಡೆಸಿದರು.
ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ ಅವರು, ‘ಪ್ರಸ್ತುತ ಸಕ್ಕರೆಯ ಮಾರುಕಟ್ಟೆಯ ಬೆಲೆಯು ಅದರ ಉತ್ಪಾದನಾ ವೆಚ್ಚಗಿಂತಲೂ ಕಡಿಮೆ ಇದೆ. ಈ ಬಗ್ಗೆ ಸರ್ಕಾರ ಗಮನ ಹರಿಸುವಂತೆ ಶಾ ಅವರನ್ನು ಕೋರಲಾಯಿತು. ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಹೆಚ್ಚಿಸುವ ಕುರಿತೂ ಚರ್ಚಿಸಲಾಯಿತು’ ಎಂದು ತಿಳಿಸಿದರು.
‘ಸಕ್ಕರೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಶಾ ಅವರು ಭರವಸೆ ನೀಡಿದ್ದಾರೆ’ ಎಂದೂ ಪವಾರ್ ಮಾಹಿತಿ ನೀಡಿದರು.
ಭೇಟಿಯ ವೇಳೆ ಪವಾರ್ ಅವರೊಂದಿಗೆ ರಾಷ್ಟ್ರೀಯ–ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಅಧ್ಯಕ್ಷ ಜಯಪ್ರಕಾಶ್ ದಂಡೇಗಾಂವ್ಕರ್ ಮತ್ತು ಎನ್ಸಿಪಿಯ ರಾಯಗಡದ ಸಂಸದ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.