<p class="title"><strong>ನವದೆಹಲಿ</strong>: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ ದೆಹಲಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಕ್ಕರೆಯ ಬೆಲೆ ಹೆಚ್ಚಳ ಮತ್ತು ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಎಥೆನಾಲ್ ಅನ್ನು ಬೆರೆಸುವಿಕೆ ಕುರಿತು ಚರ್ಚೆ ನಡೆಸಿದರು.</p>.<p class="title">ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ ಅವರು, ‘ಪ್ರಸ್ತುತ ಸಕ್ಕರೆಯ ಮಾರುಕಟ್ಟೆಯ ಬೆಲೆಯು ಅದರ ಉತ್ಪಾದನಾ ವೆಚ್ಚಗಿಂತಲೂ ಕಡಿಮೆ ಇದೆ. ಈ ಬಗ್ಗೆ ಸರ್ಕಾರ ಗಮನ ಹರಿಸುವಂತೆ ಶಾ ಅವರನ್ನು ಕೋರಲಾಯಿತು. ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಹೆಚ್ಚಿಸುವ ಕುರಿತೂ ಚರ್ಚಿಸಲಾಯಿತು’ ಎಂದು ತಿಳಿಸಿದರು.</p>.<p class="title">‘ಸಕ್ಕರೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಶಾ ಅವರು ಭರವಸೆ ನೀಡಿದ್ದಾರೆ’ ಎಂದೂ ಪವಾರ್ ಮಾಹಿತಿ ನೀಡಿದರು.</p>.<p class="title">ಭೇಟಿಯ ವೇಳೆ ಪವಾರ್ ಅವರೊಂದಿಗೆ ರಾಷ್ಟ್ರೀಯ–ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಅಧ್ಯಕ್ಷ ಜಯಪ್ರಕಾಶ್ ದಂಡೇಗಾಂವ್ಕರ್ ಮತ್ತು ಎನ್ಸಿಪಿಯ ರಾಯಗಡದ ಸಂಸದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಂಗಳವಾರ ದೆಹಲಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಕ್ಕರೆಯ ಬೆಲೆ ಹೆಚ್ಚಳ ಮತ್ತು ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಎಥೆನಾಲ್ ಅನ್ನು ಬೆರೆಸುವಿಕೆ ಕುರಿತು ಚರ್ಚೆ ನಡೆಸಿದರು.</p>.<p class="title">ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ ಅವರು, ‘ಪ್ರಸ್ತುತ ಸಕ್ಕರೆಯ ಮಾರುಕಟ್ಟೆಯ ಬೆಲೆಯು ಅದರ ಉತ್ಪಾದನಾ ವೆಚ್ಚಗಿಂತಲೂ ಕಡಿಮೆ ಇದೆ. ಈ ಬಗ್ಗೆ ಸರ್ಕಾರ ಗಮನ ಹರಿಸುವಂತೆ ಶಾ ಅವರನ್ನು ಕೋರಲಾಯಿತು. ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಹೆಚ್ಚಿಸುವ ಕುರಿತೂ ಚರ್ಚಿಸಲಾಯಿತು’ ಎಂದು ತಿಳಿಸಿದರು.</p>.<p class="title">‘ಸಕ್ಕರೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಶಾ ಅವರು ಭರವಸೆ ನೀಡಿದ್ದಾರೆ’ ಎಂದೂ ಪವಾರ್ ಮಾಹಿತಿ ನೀಡಿದರು.</p>.<p class="title">ಭೇಟಿಯ ವೇಳೆ ಪವಾರ್ ಅವರೊಂದಿಗೆ ರಾಷ್ಟ್ರೀಯ–ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಅಧ್ಯಕ್ಷ ಜಯಪ್ರಕಾಶ್ ದಂಡೇಗಾಂವ್ಕರ್ ಮತ್ತು ಎನ್ಸಿಪಿಯ ರಾಯಗಡದ ಸಂಸದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>