ಪಣಜಿ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ರಾಜ್ಯ ಭೇಟಿ ಸಂದರ್ಭದಲ್ಲಿ ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ವಿರೋಧಪಕ್ಷದ ನಾಯಕ ದಿಗಂಬರ್ ಕಾಮತ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಸಭೆಯ ಬಳಿಕ ಮಾತನಾಡಿದ ಚೋಡಂಕರ್ ಅವರು, 2022 ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎನ್ಸಿಪಿ ಜೊತೆಗೆ ಮೈತ್ರಿ ಆಗಬಹುದು ಎಂಬ ಸಾಧ್ಯತೆಗಳನ್ನು ತಳ್ಳಿಹಾಕಿದರು.
ಇದೊಂದು, ಸೌಹಾರ್ದಯುತ ಭೇಟಿಯಾಗಿತ್ತು. ಭೇಟಿ ಸಂದರ್ಭದಲ್ಲಿ ರಾಜಕಾರಣ ಚರ್ಚೆಯಾಗಲಿಲ್ಲ ಎಂದು ಅವರು ತಿಳಿಸಿದರು. ಶರದ್ ಪವಾರ್ ಅವರ ಜೊತೆಗೆ, ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಅವರು ಇದ್ದರು.