<p class="rtejustify"><strong>ಪುಣೆ: '</strong>ಮಹಾ ವಿಕಾಸ್ ಅಗಾಡಿ (ಎಂವಿಎ) ನೇತೃತ್ವದ ಮಹಾರಾಷ್ಟ್ರ ಸರ್ಕಾರ ಚೆನ್ನಾಗಿ ನಡೆಯುತ್ತಿದ್ದು, ಐದು ವರ್ಷಗಳ ಅವಧಿ ಪೂರೈಸಲಿದೆ' ಎಂದು ಎನ್.ಸಿ.ಪಿ ನಾಯಕ ಶರದ್ ಪವಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p class="rtejustify">ಭಾನುವಾರ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಎಂವಿಎ ಸರ್ಕಾರ ರಚನೆಯಾಗಿದ್ದು ಸಾಮಾನ್ಯ ಕಾರ್ಯಕ್ರಮ ಎಂಬ ಅಜೆಂಡಾ ಅಡಿ. ಹೀಗಾಗಿ ಇದರ ಆಧಾರದ ಮೇಲೆ ಸರ್ಕಾರ ಸರಳವಾಗಿ ಮುನ್ನಡೆಯಲಿದೆ' ಎಂದು ಹೇಳಿದ್ದಾರೆ.</p>.<p class="rtejustify">'ಸರ್ಕಾರ ನಡೆಸುವಾಗ ಕೆಲ ಸಲ ಸಣ್ಣಪುಟ್ಟ ಅಡಚಣೆಗಳು ಬರುತ್ತವೆ. ಅದನ್ನೆಲ್ಲ ನಿಭಾಯಿಸಲು ಮೈತ್ರಿಕೂಟದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮಹಾರಾಷ್ಟ್ರ ಸರ್ಕಾರ ಬೀಳುತ್ತದೆ ಎಂಬುದು ಕೇವಲ ಊಹಾಪೋಹ' ಎಂದು ಪವಾರ್ ಸ್ಪಷ್ಟಪಡಿಸಿದರು.</p>.<p class="rtejustify">'ಪಕ್ಷ ಸಂಘಟನೆಯ ವಿಚಾರ ಬಂದಾಗ ಅವರದೇಯಾದ ಕಾರ್ಯಸಿದ್ದಾಂತಗಳನ್ನು ಪಕ್ಷಗಳು ಹೊಂದಿರುತ್ತವೆ. ಇದನ್ನು ಮೈತ್ರಿಕೂಟದ ಪಕ್ಷಗಳು ಪರಸ್ಪರ ಗೌರವಿಸುತ್ತಿವೆ. ಸರ್ಕಾರದ ನಡುವೆ ಅಡಚಣೆಗಳು ಬಂದರೆ ಉನ್ನತ ಮಟ್ಟದ ಸಮಿತಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಿದೆ' ಎಂದರು.</p>.<p class="rtejustify">ಇತ್ತೀಚೆಗೆ ಎಂವಿಎ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ವರದಿಗಳು ಬಂದಿವೆ. ಮುಂಬರುವ ಮುಂಬೈ ಮಹಾನಗರ ಪಾಲಿಕೆ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂಬ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಪುಣೆ: '</strong>ಮಹಾ ವಿಕಾಸ್ ಅಗಾಡಿ (ಎಂವಿಎ) ನೇತೃತ್ವದ ಮಹಾರಾಷ್ಟ್ರ ಸರ್ಕಾರ ಚೆನ್ನಾಗಿ ನಡೆಯುತ್ತಿದ್ದು, ಐದು ವರ್ಷಗಳ ಅವಧಿ ಪೂರೈಸಲಿದೆ' ಎಂದು ಎನ್.ಸಿ.ಪಿ ನಾಯಕ ಶರದ್ ಪವಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p class="rtejustify">ಭಾನುವಾರ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಎಂವಿಎ ಸರ್ಕಾರ ರಚನೆಯಾಗಿದ್ದು ಸಾಮಾನ್ಯ ಕಾರ್ಯಕ್ರಮ ಎಂಬ ಅಜೆಂಡಾ ಅಡಿ. ಹೀಗಾಗಿ ಇದರ ಆಧಾರದ ಮೇಲೆ ಸರ್ಕಾರ ಸರಳವಾಗಿ ಮುನ್ನಡೆಯಲಿದೆ' ಎಂದು ಹೇಳಿದ್ದಾರೆ.</p>.<p class="rtejustify">'ಸರ್ಕಾರ ನಡೆಸುವಾಗ ಕೆಲ ಸಲ ಸಣ್ಣಪುಟ್ಟ ಅಡಚಣೆಗಳು ಬರುತ್ತವೆ. ಅದನ್ನೆಲ್ಲ ನಿಭಾಯಿಸಲು ಮೈತ್ರಿಕೂಟದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮಹಾರಾಷ್ಟ್ರ ಸರ್ಕಾರ ಬೀಳುತ್ತದೆ ಎಂಬುದು ಕೇವಲ ಊಹಾಪೋಹ' ಎಂದು ಪವಾರ್ ಸ್ಪಷ್ಟಪಡಿಸಿದರು.</p>.<p class="rtejustify">'ಪಕ್ಷ ಸಂಘಟನೆಯ ವಿಚಾರ ಬಂದಾಗ ಅವರದೇಯಾದ ಕಾರ್ಯಸಿದ್ದಾಂತಗಳನ್ನು ಪಕ್ಷಗಳು ಹೊಂದಿರುತ್ತವೆ. ಇದನ್ನು ಮೈತ್ರಿಕೂಟದ ಪಕ್ಷಗಳು ಪರಸ್ಪರ ಗೌರವಿಸುತ್ತಿವೆ. ಸರ್ಕಾರದ ನಡುವೆ ಅಡಚಣೆಗಳು ಬಂದರೆ ಉನ್ನತ ಮಟ್ಟದ ಸಮಿತಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಿದೆ' ಎಂದರು.</p>.<p class="rtejustify">ಇತ್ತೀಚೆಗೆ ಎಂವಿಎ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ವರದಿಗಳು ಬಂದಿವೆ. ಮುಂಬರುವ ಮುಂಬೈ ಮಹಾನಗರ ಪಾಲಿಕೆ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂಬ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>