<p class="title"><strong>ಮುಂಬೈ</strong>:ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸೋದರ ಸಂಬಂಧಿ ಪಾರ್ಥ ಪವಾರ್ ಅವರನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p class="title">ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆಗೆ ಶ್ಲಾಘನೆ ವ್ಯಕ್ತಪಡಿಸುವ ಜೊತೆಗೆನಟ ಸುಶಾಂತ್ ಸಿಂಗ್ ಅಸಹಜ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಪಾರ್ಥ ಪವಾರ್ ಒತ್ತಾಯಿಸಿದ್ದರು. ಈ ಎರಡು ಬೆಳವಣಿಗೆಗಳು ಎನ್ಸಿಪಿಯನ್ನು ಮುಜುಗರಕ್ಕೀಡು ಮಾಡಿದೆ.</p>.<p class="title">ಈ ಸಂಬಂಧ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ‘ಅವನು ಅಪ್ರಬುದ್ಧ. ಅವನ ಹೇಳಿಕೆಗೆ ನಾವು ಮಹತ್ವ ನೀಡುವುದಿಲ್ಲ’ ಎಂದಿದ್ಧಾರೆ.</p>.<p>‘ನನಗೆ ಮಹಾರಾಷ್ಟ್ರ ಮತ್ತು ಮುಂಬೈ ಪೊಲೀಸರ ಮೇಲೆ ಶೇಕಡ ನೂರರಷ್ಟು ನಂಬಿಕೆ ಇದೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆದರೆ, ಈ ಪ್ರಕರಣವನ್ನು ಸಿಬಿಐಗೆ ವಹಿಸಲೇಬೇಕು ಎಂದು ಯಾರಾದರೂ ಬಯಸಿದರೆ, ಅದನ್ನು ವಿರೋಧಿಸಲು ಯಾವುದೇ ಕಾರಣವಿಲ್ಲ’ ಎಂದು ತಿಳಿಸಿದ್ದಾರೆ.</p>.<p>ದೇಶದ ಜನರ ಭಾವನೆಗಳನ್ನು ಗಣನೆಗೆ ತೆಗೆದುಕೊಂಡು ನಟ ಸುಶಾಂತ್ ಸಿಂಗ್ ಪ್ರಕರಣದ ತನಿಖೆಯನ್ನುಸಿಬಿಐಗೆ ವಹಿಸಬೇಕು ಎಂದು ಪಾರ್ಥ ಅವರು ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿಯಾಗಿ ಒತ್ತಾಯಿದ್ದರು.</p>.<p>ಉಪಮುಖ್ಯಮಂತ್ರಿ ಅಜಿತ್ ಪವಾರ್ ಪುತ್ರ ಪಾರ್ಥ ಪವಾರ್ ಅವರನ್ನು2019ರ ಲೋಕಸಭಾ ಚುನಾವಣೆಯಲ್ಲಿಕಣಕ್ಕಿಳಿಸಲಾಗಿತ್ತು. ಆದರೆ ಅವರು ಸೋತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ</strong>:ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸೋದರ ಸಂಬಂಧಿ ಪಾರ್ಥ ಪವಾರ್ ಅವರನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p class="title">ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆಗೆ ಶ್ಲಾಘನೆ ವ್ಯಕ್ತಪಡಿಸುವ ಜೊತೆಗೆನಟ ಸುಶಾಂತ್ ಸಿಂಗ್ ಅಸಹಜ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಪಾರ್ಥ ಪವಾರ್ ಒತ್ತಾಯಿಸಿದ್ದರು. ಈ ಎರಡು ಬೆಳವಣಿಗೆಗಳು ಎನ್ಸಿಪಿಯನ್ನು ಮುಜುಗರಕ್ಕೀಡು ಮಾಡಿದೆ.</p>.<p class="title">ಈ ಸಂಬಂಧ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ‘ಅವನು ಅಪ್ರಬುದ್ಧ. ಅವನ ಹೇಳಿಕೆಗೆ ನಾವು ಮಹತ್ವ ನೀಡುವುದಿಲ್ಲ’ ಎಂದಿದ್ಧಾರೆ.</p>.<p>‘ನನಗೆ ಮಹಾರಾಷ್ಟ್ರ ಮತ್ತು ಮುಂಬೈ ಪೊಲೀಸರ ಮೇಲೆ ಶೇಕಡ ನೂರರಷ್ಟು ನಂಬಿಕೆ ಇದೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಆದರೆ, ಈ ಪ್ರಕರಣವನ್ನು ಸಿಬಿಐಗೆ ವಹಿಸಲೇಬೇಕು ಎಂದು ಯಾರಾದರೂ ಬಯಸಿದರೆ, ಅದನ್ನು ವಿರೋಧಿಸಲು ಯಾವುದೇ ಕಾರಣವಿಲ್ಲ’ ಎಂದು ತಿಳಿಸಿದ್ದಾರೆ.</p>.<p>ದೇಶದ ಜನರ ಭಾವನೆಗಳನ್ನು ಗಣನೆಗೆ ತೆಗೆದುಕೊಂಡು ನಟ ಸುಶಾಂತ್ ಸಿಂಗ್ ಪ್ರಕರಣದ ತನಿಖೆಯನ್ನುಸಿಬಿಐಗೆ ವಹಿಸಬೇಕು ಎಂದು ಪಾರ್ಥ ಅವರು ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿಯಾಗಿ ಒತ್ತಾಯಿದ್ದರು.</p>.<p>ಉಪಮುಖ್ಯಮಂತ್ರಿ ಅಜಿತ್ ಪವಾರ್ ಪುತ್ರ ಪಾರ್ಥ ಪವಾರ್ ಅವರನ್ನು2019ರ ಲೋಕಸಭಾ ಚುನಾವಣೆಯಲ್ಲಿಕಣಕ್ಕಿಳಿಸಲಾಗಿತ್ತು. ಆದರೆ ಅವರು ಸೋತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>