ಹೈದರಾಬಾದ್: ‘ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸರ್ಕಾರದ ಕಾಲೇಶ್ವರಂ ನೀರಾವರಿ ಯೋಜನೆಯ ಜಾರಿಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ’ ಎಂದು ಆರೋಪಿಸಿ ವೈಎಸ್ಆರ್ ತೆಲಂಗಾಣದ ಮುಖ್ಯಸ್ಥೆ ವೈ.ಎಸ್. ಶರ್ಮಿಳಾ ಅವರು ದೆಹಲಿಯಲ್ಲಿ ಜಂತರ್ ಮಂತರ್ನಿಂದ ‘ಸಂಸತ್ತು ಚಲೋ’ ಚಳವಳಿ ನಡೆಸಿದರು. ಈ ವೇಳೆ ಶರ್ಮಿಳಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು.