ನವದೆಹಲಿ: ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಮೃತಪಟ್ಟಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ.
ತರೂರ್ ಟ್ವೀಟ್ ಗಮನಕ್ಕೆ ಬಂದ ಕೂಡಲೇ ಬಿಜೆಪಿ ನಾಯಕರು ಗಮನ ಸೆಳೆದಿದ್ದರು. ಮಹಾಜನ್ ಅವರು ಆರೋಗ್ಯದಿಂದ ಇದ್ದಾರೆ ಎಂದು ಬಿಜೆಪಿ ನಾಯಕ ಕೈಲಾಸ್ ವಿಜಯವರ್ಗೀಯ ಟ್ವೀಟ್ ಮಾಡಿದ್ದರು.
ತಕ್ಷಣ ಎಚ್ಚೆತ್ತುಕೊಂಡ ತರೂರ್, ಟ್ವೀಟ್ ಅಳಿಸಿ ಹಾಕಿದ್ದಾರೆ.
ತರೂರ್ ಮಾಡಿದ್ದ ಟ್ವೀಟ್ ಸ್ಕ್ರೀನ್ಶಾಟ್
‘ಕೈಲಾಸ್ ವಿಜಯವರ್ಗೀಯ ಅವರಿಗೆ ಧನ್ಯವಾದಗಳು. ನಾನು ಟ್ವೀಟ್ ಅಳಿಸಿದ್ದೇನೆ. ಅಂತಹ ಸುಳ್ಳು ಸುದ್ದಿ ಸೃಷ್ಟಿಸಲು ಮತ್ತು ಹರಡಲು ಜನ ಯಾಕೆ ಪ್ರಚೋದನೆಗೊಳ್ಳುತ್ತಾರೆ ಎಂದು ಅಚ್ಚರಿಯಾಗುತ್ತಿದೆ. ಸುಮಿತ್ರಾ ಮಹಾಜನ್ ಅವರು ಆರೋಗ್ಯಯುತವಾದ ಸುದೀರ್ಘ ಜೀವನ ನಡೆಸಲಿ, ಶುಭ ಹಾರೈಕೆಗಳು’ ಎಂದು ತರೂರ್ ಟ್ವೀಟ್ ಮಾಡಿದ್ದಾರೆ.
Thanks @kailashOnline. I have deleted my tweet. I wonder what motivates people to invent and spread such evil news that takes in people. My best wishes for Sumitra ji’s health and long life.
‘ಸುಮಿತ್ರಾ ಮಹಾಜನ್ ಅವರು ಚೆನ್ನಾಗಿದ್ದಾರೆಂದು ತಿಳಿದು ನಿರಾಳವಾಗಿದ್ದೇನೆ. ನನಗೆ ದೊರೆತ ಮಾಹಿತಿ ವಿಶ್ವಾಸಾರ್ಹ ಮೂಲದ್ದೆಂದು ತಿಳಿದುಕೊಂಡಿದ್ದೆ. ಅಂತಹ ಸುದ್ದಿಗಳನ್ನು ಹರಡುವ ಬಗ್ಗೆ ದಿಗಿಲುಗೊಂಡಿದ್ದೇನೆ’ ಎಂದು ಅವರು ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಈ ಮಧ್ಯೆ, ಸುಮಿತ್ರಾ ಮಹಾಜನ್ ಪುತ್ರ ಮಂದಾರ್ ಅವರು ವಿಡಿಯೊ ಹೇಳಿಕೆ ಬಿಡುಗಡೆ ಮಾಡಿ, ತಾಯಿಯವರು ಆರೋಗ್ಯದಿಂದ ಇದ್ದಾರೆ. ಅವರ ಕುರಿತ ವದಂತಿಗಳಿಗೆ ಪ್ರತಿಕ್ರಿಯಿಸಬೇಡಿ ಎಂದು ಮನವಿ ಮಾಡಿದ್ದಾರೆ.
I am relieved if that is so. I received this from what I thought was a reliable source: “पूर्व लोकसभा अध्यक्ष श्रीमती सुमित्रा महाजन जी हमारे बीच नहीं रहीं. ईश्वर दिवंगत आत्मा को अपने श्रीचरणों में स्थान दें.🙏” Happy to retract & appalled that anyone would make up such news. https://t.co/3c8pDGaBRv