<p>ನವದೆಹಲಿ: ಪ್ರಜಾಪ್ರಭುತ್ವದಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಕೃಷಿ ಕಾಯ್ದೆ ಹಾಗೂ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಮಂಡಿಸುವ ಹಕ್ಕಿದೆ ಎಂದು ಸಂಸದ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿಕೆ ನೀಡಿದ್ದಾರೆ.</p>.<p>ಬ್ರಿಟನ್ ಸಂಸತ್ತಿನಲ್ಲಿ ಭಾರತದಲ್ಲಿ ರೂಪಿಸಿರುವ ಕೃಷಿ ಕಾನೂನು ಹಾಗೂ ರೈತರ ಪ್ರತಿಭಟನೆ ಕುರಿತು ಚರ್ಚೆ ನಡೆಸಿರುವ ವಿಚಾರವಾಗಿ ಬ್ರಿಟನ್ ರಾಯಭಾರಿಗೆ ಭಾರತದ ವಿದೇಶಾಂಗ ಸಚಿವಾಲಯ ಸಮನ್ಸ್ ಜಾರಿಗೊಳಿಸಿತ್ತು. ಈ ಬಗ್ಗೆ ಬ್ರಿಟನ್ ಸಂಸತ್ತಿನಲ್ಲಿ ಕೃಷಿ ಕಾನೂನು ಚರ್ಚೆಯನ್ನು ಶಶಿ ತರೂರ್ ಸಮರ್ಥಿಸಿದ್ದಾರೆ.</p>.<p>ಭಾರತ ಸರ್ಕಾರವು ತನ್ನ ನಿಲುವನ್ನು ವ್ಯಕ್ತಪಡಿಸುವ ಮೂಲಕ ಕರ್ತವ್ಯ ನಿಭಾಯಿಸಿದ್ದಕ್ಕಾಗಿ ನಾನು ದೂಷಿಸುವುದಿಲ್ಲ. ಆದರೆ ಇನ್ನೊಂದು ದೃಷ್ಟಿಕೋನವಿದೆ ಎಂಬುದನ್ನು ನಾವು ಮನದಟ್ಟು ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಚುನಾಯಿತ ಪ್ರತಿನಿಧಿಗಳು ಈ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಹೇಳಲು ಮುಕ್ತವಾಗಿದ್ದಾರೆ ಎಂದು ಹೇಳಿದರು.</p>.<p>ಇದನ್ನೂ ಓದಿ: <a href="https://www.prajavani.net/india-news/india-summons-uk-envoy-over-unwarranted-discussion-on-farm-laws-812066.html" target="_blank">ಕೃಷಿ ಕಾಯ್ದೆ ಕುರಿತುಚರ್ಚೆ;ಬ್ರಿಟನ್ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದ ಭಾರತ</a></p>.<p>ಈ ವಿಷಯದಲ್ಲಿ ಯಾವುದೇ ಅಚ್ಚರಿಯ ವಿಷಯಗಳಿಲ್ಲ. ಪ್ರಜಾಪ್ರಭುತ್ವ ಸರ್ಕಾರಗಳ ನಡುವೆ ನ್ಯಾಯವಾದ ವ್ಯವಹಾರವಾಗಿದ್ದು, ಸಾಮಾನ್ಯವಿಚಾರವಾಗಿ ಪರಿಗಣಿಸಬೇಕು ಎಂದು ಮಾಜಿ ವಿದೇಶಾಂಗ ಸಚಿವರೂ ಆಗಿರುವ ಶಶಿ ತರೂರ್ ಹೇಳಿದರು.</p>.<p>ಭಾರತದಲ್ಲಿ ನಾವು ಪ್ಯಾಲೆಸ್ತಿನ್ ವಿಷಯವನ್ನು ಚರ್ಚಿಸಿದ್ದೇವೆ. ವಿದೇಶಿಯರ ಬೇರೆ ವಿಷಯಗಳ ಕುರಿತಾಗಿಯೂ ಚರ್ಚಿಸಬಹುದಾಗಿದೆ. ಬ್ರಿಟಿಷ್ ಸಂಸತ್ತಿಗೂ ಅದೇ ಹಕ್ಕಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಪ್ರಜಾಪ್ರಭುತ್ವದಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಕೃಷಿ ಕಾಯ್ದೆ ಹಾಗೂ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಮಂಡಿಸುವ ಹಕ್ಕಿದೆ ಎಂದು ಸಂಸದ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿಕೆ ನೀಡಿದ್ದಾರೆ.</p>.<p>ಬ್ರಿಟನ್ ಸಂಸತ್ತಿನಲ್ಲಿ ಭಾರತದಲ್ಲಿ ರೂಪಿಸಿರುವ ಕೃಷಿ ಕಾನೂನು ಹಾಗೂ ರೈತರ ಪ್ರತಿಭಟನೆ ಕುರಿತು ಚರ್ಚೆ ನಡೆಸಿರುವ ವಿಚಾರವಾಗಿ ಬ್ರಿಟನ್ ರಾಯಭಾರಿಗೆ ಭಾರತದ ವಿದೇಶಾಂಗ ಸಚಿವಾಲಯ ಸಮನ್ಸ್ ಜಾರಿಗೊಳಿಸಿತ್ತು. ಈ ಬಗ್ಗೆ ಬ್ರಿಟನ್ ಸಂಸತ್ತಿನಲ್ಲಿ ಕೃಷಿ ಕಾನೂನು ಚರ್ಚೆಯನ್ನು ಶಶಿ ತರೂರ್ ಸಮರ್ಥಿಸಿದ್ದಾರೆ.</p>.<p>ಭಾರತ ಸರ್ಕಾರವು ತನ್ನ ನಿಲುವನ್ನು ವ್ಯಕ್ತಪಡಿಸುವ ಮೂಲಕ ಕರ್ತವ್ಯ ನಿಭಾಯಿಸಿದ್ದಕ್ಕಾಗಿ ನಾನು ದೂಷಿಸುವುದಿಲ್ಲ. ಆದರೆ ಇನ್ನೊಂದು ದೃಷ್ಟಿಕೋನವಿದೆ ಎಂಬುದನ್ನು ನಾವು ಮನದಟ್ಟು ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಚುನಾಯಿತ ಪ್ರತಿನಿಧಿಗಳು ಈ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಹೇಳಲು ಮುಕ್ತವಾಗಿದ್ದಾರೆ ಎಂದು ಹೇಳಿದರು.</p>.<p>ಇದನ್ನೂ ಓದಿ: <a href="https://www.prajavani.net/india-news/india-summons-uk-envoy-over-unwarranted-discussion-on-farm-laws-812066.html" target="_blank">ಕೃಷಿ ಕಾಯ್ದೆ ಕುರಿತುಚರ್ಚೆ;ಬ್ರಿಟನ್ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಿದ ಭಾರತ</a></p>.<p>ಈ ವಿಷಯದಲ್ಲಿ ಯಾವುದೇ ಅಚ್ಚರಿಯ ವಿಷಯಗಳಿಲ್ಲ. ಪ್ರಜಾಪ್ರಭುತ್ವ ಸರ್ಕಾರಗಳ ನಡುವೆ ನ್ಯಾಯವಾದ ವ್ಯವಹಾರವಾಗಿದ್ದು, ಸಾಮಾನ್ಯವಿಚಾರವಾಗಿ ಪರಿಗಣಿಸಬೇಕು ಎಂದು ಮಾಜಿ ವಿದೇಶಾಂಗ ಸಚಿವರೂ ಆಗಿರುವ ಶಶಿ ತರೂರ್ ಹೇಳಿದರು.</p>.<p>ಭಾರತದಲ್ಲಿ ನಾವು ಪ್ಯಾಲೆಸ್ತಿನ್ ವಿಷಯವನ್ನು ಚರ್ಚಿಸಿದ್ದೇವೆ. ವಿದೇಶಿಯರ ಬೇರೆ ವಿಷಯಗಳ ಕುರಿತಾಗಿಯೂ ಚರ್ಚಿಸಬಹುದಾಗಿದೆ. ಬ್ರಿಟಿಷ್ ಸಂಸತ್ತಿಗೂ ಅದೇ ಹಕ್ಕಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>