<p><strong>ನವದೆಹಲಿ: </strong>‘ಹಿಂದುತ್ವ ಚಳವಳಿಯು1947ರ ಮುಸ್ಲಿಂ ಕೋಮುವಾದದ ಪ್ರತಿಬಿಂಬವಿದ್ದಂತೆ. ಈ ಚಳವಳಿಯ ಗೆಲುವು ಭಾರತೀಯ ಕಲ್ಪನೆಯ ಅಂತ್ಯವನ್ನು ಸೂಚಿಸುತ್ತದೆ’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಹಿಂದೂ ಭಾರತವೆಂದರೆ ಅದು ಹಿಂದೂಗಳದ್ದಲ್ಲ. ಅದು ಸಂಘಿ ಹಿಂದುತ್ವ ರಾಷ್ಟ್ರ. ಇದು ಸಂಪೂರ್ಣವಾಗಿ ಭಿನ್ನವಾಗಿರುವ ದೇಶ’ ಎಂದು ತಾವು ಬರೆದಿರುವ ‘ದಿ ಬ್ಯಾಟಲ್ ಆಫ್ ಬಿಲಾಂಗಿಂಗ್’ ಪುಸ್ತಕದಲ್ಲಿ ತರೂರ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/star-campaigner-is-neither-a-post-nor-a-status-kamal-nath-775208.html" itemprop="url">ಸ್ಟಾರ್ ಪ್ರಚಾರಕ ಎಂಬುದು ಹುದ್ದೆ ಅಥವಾ ಸ್ಥಾನಮಾನವಲ್ಲ: ಕಮಲನಾಥ್</a></p>.<p>ಅಲೆಪ್ ಬುಕ್ ಕಂಪನಿಯು ಹೊರತಂದಿರುವ ಈ ಪುಸ್ತಕವನ್ನು ಶನಿವಾರ ಬಿಡುಗಡೆಗೊಳಿಸಲಾಯಿತು.</p>.<p>‘ನನ್ನಂತಹವರು ತಾವು ಪ್ರೀತಿಸುವ ಭಾರತವನ್ನು ಹಾಗೆಯೇ ಉಳಿಸಿಕೊಳ್ಳಲು ಬಯಸುತ್ತಾರೆ. ಈ ರಾಷ್ಟ್ರವನ್ನು ನಾವು ದ್ವೇಷಿಸುವ ಹಾಗೆ ಮಾರ್ಪಾಡು ಮಾಡಬೇಡಿ’ ಎಂದು ಅವರು ನುಡಿದಿದ್ದಾರೆ.</p>.<p>ಹಿಂದುತ್ವ ಸಿದ್ಧಾಂತ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಹಿಂದುತ್ವ ಚಳವಳಿಯು1947ರ ಮುಸ್ಲಿಂ ಕೋಮುವಾದದ ಪ್ರತಿಬಿಂಬವಿದ್ದಂತೆ. ಈ ಚಳವಳಿಯ ಗೆಲುವು ಭಾರತೀಯ ಕಲ್ಪನೆಯ ಅಂತ್ಯವನ್ನು ಸೂಚಿಸುತ್ತದೆ’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಹಿಂದೂ ಭಾರತವೆಂದರೆ ಅದು ಹಿಂದೂಗಳದ್ದಲ್ಲ. ಅದು ಸಂಘಿ ಹಿಂದುತ್ವ ರಾಷ್ಟ್ರ. ಇದು ಸಂಪೂರ್ಣವಾಗಿ ಭಿನ್ನವಾಗಿರುವ ದೇಶ’ ಎಂದು ತಾವು ಬರೆದಿರುವ ‘ದಿ ಬ್ಯಾಟಲ್ ಆಫ್ ಬಿಲಾಂಗಿಂಗ್’ ಪುಸ್ತಕದಲ್ಲಿ ತರೂರ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/star-campaigner-is-neither-a-post-nor-a-status-kamal-nath-775208.html" itemprop="url">ಸ್ಟಾರ್ ಪ್ರಚಾರಕ ಎಂಬುದು ಹುದ್ದೆ ಅಥವಾ ಸ್ಥಾನಮಾನವಲ್ಲ: ಕಮಲನಾಥ್</a></p>.<p>ಅಲೆಪ್ ಬುಕ್ ಕಂಪನಿಯು ಹೊರತಂದಿರುವ ಈ ಪುಸ್ತಕವನ್ನು ಶನಿವಾರ ಬಿಡುಗಡೆಗೊಳಿಸಲಾಯಿತು.</p>.<p>‘ನನ್ನಂತಹವರು ತಾವು ಪ್ರೀತಿಸುವ ಭಾರತವನ್ನು ಹಾಗೆಯೇ ಉಳಿಸಿಕೊಳ್ಳಲು ಬಯಸುತ್ತಾರೆ. ಈ ರಾಷ್ಟ್ರವನ್ನು ನಾವು ದ್ವೇಷಿಸುವ ಹಾಗೆ ಮಾರ್ಪಾಡು ಮಾಡಬೇಡಿ’ ಎಂದು ಅವರು ನುಡಿದಿದ್ದಾರೆ.</p>.<p>ಹಿಂದುತ್ವ ಸಿದ್ಧಾಂತ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>