ಅಹಂಕಾರ ಬಿಡಿ, ರೈತರಿಗೆ ನ್ಯಾಯ ಒದಗಿಸಿ: ಕೇಂದ್ರಕ್ಕೆ ರಾಹುಲ್ ಸಲಹೆ

ನವದೆಹಲಿ: ‘ಪ್ರತಿಭಟನಾ ನಿರತ ರೈತರು ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ. ಮೊದಲು ಕೇಂದ್ರ ಸರ್ಕಾರ ಅಹಂಕಾರವನ್ನು ಬಿಟ್ಟು, ರೈತರ ಪ್ರತಿಭಟನೆಗೆ ಸ್ಪಂದಿಸಬೇಕು. ರೈತರಿಗೆ ಅವರ ಹಕ್ಕುಗಳನ್ನು ನೀಡಬೇಕು‘ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ರೈತರ ಕಠಿಣ ಪರಿಶ್ರಮಕ್ಕೆ ನಾವೆಲ್ಲರೂ ಋಣಿಯಾಗಿದ್ದೇವೆ. ರೈತರಿಗೆ ನ್ಯಾಯ ಒದಗಿಸುವುದರ ಮೂಲಕ ಮಾತ್ರ ಈ ಋಣವನ್ನು ತೀರಿಸಲು ಸಾಧ್ಯ‘ ಎಂದು ಹೇಳಿದ್ದಾರೆ.
‘ಅನ್ನ ಬೆಳೆಯುವ ರೈತರು ರಸ್ತೆಗಳಲ್ಲಿ, ಹೊಲ–ಗದ್ದೆಗಳಲ್ಲಿ ಕುಳಿತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲರೂ ರೈತರ ಋಣದಲ್ಲಿದ್ದೇವೆ ಎಂಬದುನ್ನು ಅರಿತು, ಅವರು ಕೇಳುತ್ತಿರುವ ಹಕ್ಕುಗಳನ್ನು ನೀಡಿ, ಅವರಿಗೆ ನ್ಯಾಯ ಸಲ್ಲಿಸುವ ಮೂಲಕ ಆ ಋಣವನ್ನು ತೀರಿಸಬೇಕೇ ಹೊರತು, ಅವರನ್ನು ಲಾಠಿಯಿಂದ ಹೊಡೆದು, ಅಶ್ರವಾಯು ಪ್ರಯೋಗಿಸಿ ದೌರ್ಜನ್ಯವೆಸಗುವುದಲ್ಲ‘ ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
‘ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ಬನ್ನಿ, ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ‘ ಎಂದು ರಾಹುಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಾದ ಸಿಂಘು, ಟಿಕ್ರಿ ಮತ್ತು ಘಾಜಿಪುರಗಳಲ್ಲಿ ಪಂಜಾಬ್ ಮತ್ತು ಹರಿಯಾಣಾ ರಾಜ್ಯಗಳ ನೂರಾರು ರೈತರು ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
अन्नदाता सड़कों-मैदानों में धरना दे रहे हैं,
और
‘झूठ’ टीवी पर भाषण!किसान की मेहनत का हम सब पर क़र्ज़ है।
ये क़र्ज़ उन्हें न्याय और हक़ देकर ही उतरेगा, न कि उन्हें दुत्कार कर, लाठियाँ मारकर और आंसू गैस चलाकर।
जागिए, अहंकार की कुर्सी से उतरकर सोचिए और किसान का अधिकार दीजिए।
— Rahul Gandhi (@RahulGandhi) December 1, 2020
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.