<p><strong>ನವದೆಹಲಿ: </strong>‘ಪ್ರತಿಭಟನಾ ನಿರತ ರೈತರು ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ. ಮೊದಲು ಕೇಂದ್ರ ಸರ್ಕಾರ ಅಹಂಕಾರವನ್ನು ಬಿಟ್ಟು, ರೈತರ ಪ್ರತಿಭಟನೆಗೆ ಸ್ಪಂದಿಸಬೇಕು. ರೈತರಿಗೆ ಅವರ ಹಕ್ಕುಗಳನ್ನು ನೀಡಬೇಕು‘ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ‘ರೈತರ ಕಠಿಣ ಪರಿಶ್ರಮಕ್ಕೆ ನಾವೆಲ್ಲರೂ ಋಣಿಯಾಗಿದ್ದೇವೆ. ರೈತರಿಗೆ ನ್ಯಾಯ ಒದಗಿಸುವುದರ ಮೂಲಕ ಮಾತ್ರ ಈ ಋಣವನ್ನು ತೀರಿಸಲು ಸಾಧ್ಯ‘ ಎಂದು ಹೇಳಿದ್ದಾರೆ.</p>.<p>‘ಅನ್ನ ಬೆಳೆಯುವ ರೈತರು ರಸ್ತೆಗಳಲ್ಲಿ, ಹೊಲ–ಗದ್ದೆಗಳಲ್ಲಿ ಕುಳಿತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲರೂ ರೈತರ ಋಣದಲ್ಲಿದ್ದೇವೆ ಎಂಬದುನ್ನು ಅರಿತು, ಅವರು ಕೇಳುತ್ತಿರುವ ಹಕ್ಕುಗಳನ್ನು ನೀಡಿ, ಅವರಿಗೆ ನ್ಯಾಯ ಸಲ್ಲಿಸುವ ಮೂಲಕ ಆ ಋಣವನ್ನು ತೀರಿಸಬೇಕೇ ಹೊರತು, ಅವರನ್ನು ಲಾಠಿಯಿಂದ ಹೊಡೆದು, ಅಶ್ರವಾಯು ಪ್ರಯೋಗಿಸಿ ದೌರ್ಜನ್ಯವೆಸಗುವುದಲ್ಲ‘ ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>‘ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ಬನ್ನಿ, ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ‘ ಎಂದು ರಾಹುಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಾದ ಸಿಂಘು, ಟಿಕ್ರಿ ಮತ್ತು ಘಾಜಿಪುರಗಳಲ್ಲಿ ಪಂಜಾಬ್ ಮತ್ತು ಹರಿಯಾಣಾ ರಾಜ್ಯಗಳ ನೂರಾರು ರೈತರು ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಪ್ರತಿಭಟನಾ ನಿರತ ರೈತರು ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ. ಮೊದಲು ಕೇಂದ್ರ ಸರ್ಕಾರ ಅಹಂಕಾರವನ್ನು ಬಿಟ್ಟು, ರೈತರ ಪ್ರತಿಭಟನೆಗೆ ಸ್ಪಂದಿಸಬೇಕು. ರೈತರಿಗೆ ಅವರ ಹಕ್ಕುಗಳನ್ನು ನೀಡಬೇಕು‘ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ‘ರೈತರ ಕಠಿಣ ಪರಿಶ್ರಮಕ್ಕೆ ನಾವೆಲ್ಲರೂ ಋಣಿಯಾಗಿದ್ದೇವೆ. ರೈತರಿಗೆ ನ್ಯಾಯ ಒದಗಿಸುವುದರ ಮೂಲಕ ಮಾತ್ರ ಈ ಋಣವನ್ನು ತೀರಿಸಲು ಸಾಧ್ಯ‘ ಎಂದು ಹೇಳಿದ್ದಾರೆ.</p>.<p>‘ಅನ್ನ ಬೆಳೆಯುವ ರೈತರು ರಸ್ತೆಗಳಲ್ಲಿ, ಹೊಲ–ಗದ್ದೆಗಳಲ್ಲಿ ಕುಳಿತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಾವೆಲ್ಲರೂ ರೈತರ ಋಣದಲ್ಲಿದ್ದೇವೆ ಎಂಬದುನ್ನು ಅರಿತು, ಅವರು ಕೇಳುತ್ತಿರುವ ಹಕ್ಕುಗಳನ್ನು ನೀಡಿ, ಅವರಿಗೆ ನ್ಯಾಯ ಸಲ್ಲಿಸುವ ಮೂಲಕ ಆ ಋಣವನ್ನು ತೀರಿಸಬೇಕೇ ಹೊರತು, ಅವರನ್ನು ಲಾಠಿಯಿಂದ ಹೊಡೆದು, ಅಶ್ರವಾಯು ಪ್ರಯೋಗಿಸಿ ದೌರ್ಜನ್ಯವೆಸಗುವುದಲ್ಲ‘ ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>‘ದುರಹಂಕಾರದ ಕುರ್ಚಿಯಿಂದ ಕೆಳಗಿಳಿದು ಬನ್ನಿ, ರೈತರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆ ಯೋಚಿಸಿ‘ ಎಂದು ರಾಹುಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಾದ ಸಿಂಘು, ಟಿಕ್ರಿ ಮತ್ತು ಘಾಜಿಪುರಗಳಲ್ಲಿ ಪಂಜಾಬ್ ಮತ್ತು ಹರಿಯಾಣಾ ರಾಜ್ಯಗಳ ನೂರಾರು ರೈತರು ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>