ಇಲ್ಲಿಯ ಕ್ರಲ್ಖೂಡ್ ಪ್ರದೇಶದಲ್ಲಿರುವ ದೇವಸ್ಥಾನವನ್ನು ಭಯೋತ್ಪಾದನಾ ಚಟುವಟಿಕೆ ಹಿನ್ನೆಲೆಯಲ್ಲಿ 1990ರಲ್ಲಿ ಮುಚ್ಚಲಾಗಿತ್ತು. ಅಂದಿನಿಂದ ಈ ದೇವಸ್ಥಾನದಲ್ಲಿ ಯಾವುದೇ ಪೂಜೆಗಳು ನಡೆದಿಲ್ಲ. ಸುಮಾರು 31 ವರ್ಷಗಳ ನಂತರ ಮಂಗಳವಾರ ಮೊದಲ ಬಾರಿಗೆ ಮೂವತ್ತು ಕಾಶ್ಮೀರಿ ಪಂಡಿತರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರಿಗೆ ಪ್ರಸಾದವನ್ನುನೀಡಲಾಯಿತು.