<p><strong>ನವದೆಹಲಿ: </strong>ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಾಲನೆ ನೀಡಿದರು.</p>.<p>ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ‘ಶಿಕ್ಷಕ ಪರ್ವ’ವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಈ ಕಾರ್ಯಕ್ರಮಗಳು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವುದಲ್ಲದೇ ಯುವಕರ ಭವಿಷ್ಯವನ್ನು ರೂಪಿಸಲಿದೆ. ಇದು ದೇಶವನ್ನು ರೂಪಿಸುವಲ್ಲಿಯೂ ಪ್ರಮಖ ಪಾತ್ರವಹಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಭಾರತೀಯ ಸಂಜ್ಞೆ ಭಾಷೆ ನಿಘಂಟು(ಯುನಿವರ್ಸಲ್ ಡಿಸೈನ್ ಆಫ್ ಲರ್ನಿಂಗ್ಗೆ ಅನುಗುಣವಾಗಿ ಶ್ರವಣ ದೋಷವುಳ್ಳವರಿಗಾಗಿ ರೂಪಿಸಲಾದ ಆಡಿಯೊ–ಪಠ್ಯ ಎಂಬೆಡೆಡ್ ಸಂಜ್ಞೆ ಭಾಷೆ ವಿಡಿಯೊ), ಟಾಕಿಂಗ್ ಬುಕ್ (ದೃಷ್ಟಿದೋಷವುಳ್ಳವರಿಗಾಗಿ ಆಡಿಯೊ ಪುಸ್ತಕ), ನಿಪುಣ್ ಭಾರತ್ ಮತ್ತು ವಿದ್ಯಾಂಜಲಿ ಪೋರ್ಟಲ್ಗೆ ಪ್ರಧಾನಿ ಅವರು ಚಾಲನೆ ನೀಡಿದರು.</p>.<p>ಈ ವೇಳೆ ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ನಲ್ಲಿ ಭಾಗಿಯಾಗಿದ್ದ ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಪ್ರಧಾನಿ ಅವರು, ‘ಭಾರತದ ಯುವ ಪೀಳಿಗೆಗೆ ಅವರು ಸ್ಪೂರ್ತಿ ನೀಡಿದ್ದಾರೆ’ ಎಂದರು.</p>.<p>‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಕನಿಷ್ಠ 75 ಶಾಲೆಗಳಿಗೆ ಭೇಟಿ ನೀಡುವಂತೆ ಕ್ರೀಡಾಪಟುಗಳಲ್ಲಿ ನಾನು ಮನವಿ ಮಾಡಿದ್ದೆ. ಇದಕ್ಕೆ ಅವರು ಸಮ್ಮತಿಸಿದ್ದಾರೆ ’ಎಂದು ತಿಳಿಸಿದರು.</p>.<p>‘ಕಳೆದ ಏಳು ವರ್ಷಗಳಲ್ಲಿ ಸರ್ಕಾರದ ನಿರ್ಧಾರಗಳಲ್ಲಿ ಜನರು ಪ್ರಮುಖ ಪಾತ್ರವಹಿಸಿದ್ದಾರೆ. ಜನರ ಸಹಭಾಗಿತ್ವ ಇಲ್ಲದೇ ಸ್ವಚ್ಛ ಭಾರತದಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿರಲಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಾಲನೆ ನೀಡಿದರು.</p>.<p>ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ‘ಶಿಕ್ಷಕ ಪರ್ವ’ವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಈ ಕಾರ್ಯಕ್ರಮಗಳು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವುದಲ್ಲದೇ ಯುವಕರ ಭವಿಷ್ಯವನ್ನು ರೂಪಿಸಲಿದೆ. ಇದು ದೇಶವನ್ನು ರೂಪಿಸುವಲ್ಲಿಯೂ ಪ್ರಮಖ ಪಾತ್ರವಹಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಭಾರತೀಯ ಸಂಜ್ಞೆ ಭಾಷೆ ನಿಘಂಟು(ಯುನಿವರ್ಸಲ್ ಡಿಸೈನ್ ಆಫ್ ಲರ್ನಿಂಗ್ಗೆ ಅನುಗುಣವಾಗಿ ಶ್ರವಣ ದೋಷವುಳ್ಳವರಿಗಾಗಿ ರೂಪಿಸಲಾದ ಆಡಿಯೊ–ಪಠ್ಯ ಎಂಬೆಡೆಡ್ ಸಂಜ್ಞೆ ಭಾಷೆ ವಿಡಿಯೊ), ಟಾಕಿಂಗ್ ಬುಕ್ (ದೃಷ್ಟಿದೋಷವುಳ್ಳವರಿಗಾಗಿ ಆಡಿಯೊ ಪುಸ್ತಕ), ನಿಪುಣ್ ಭಾರತ್ ಮತ್ತು ವಿದ್ಯಾಂಜಲಿ ಪೋರ್ಟಲ್ಗೆ ಪ್ರಧಾನಿ ಅವರು ಚಾಲನೆ ನೀಡಿದರು.</p>.<p>ಈ ವೇಳೆ ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ನಲ್ಲಿ ಭಾಗಿಯಾಗಿದ್ದ ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಪ್ರಧಾನಿ ಅವರು, ‘ಭಾರತದ ಯುವ ಪೀಳಿಗೆಗೆ ಅವರು ಸ್ಪೂರ್ತಿ ನೀಡಿದ್ದಾರೆ’ ಎಂದರು.</p>.<p>‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಕನಿಷ್ಠ 75 ಶಾಲೆಗಳಿಗೆ ಭೇಟಿ ನೀಡುವಂತೆ ಕ್ರೀಡಾಪಟುಗಳಲ್ಲಿ ನಾನು ಮನವಿ ಮಾಡಿದ್ದೆ. ಇದಕ್ಕೆ ಅವರು ಸಮ್ಮತಿಸಿದ್ದಾರೆ ’ಎಂದು ತಿಳಿಸಿದರು.</p>.<p>‘ಕಳೆದ ಏಳು ವರ್ಷಗಳಲ್ಲಿ ಸರ್ಕಾರದ ನಿರ್ಧಾರಗಳಲ್ಲಿ ಜನರು ಪ್ರಮುಖ ಪಾತ್ರವಹಿಸಿದ್ದಾರೆ. ಜನರ ಸಹಭಾಗಿತ್ವ ಇಲ್ಲದೇ ಸ್ವಚ್ಛ ಭಾರತದಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿರಲಿಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>