<p><strong>ಮುಂಬೈ</strong>:ಏಕನಾಥ ಶಿಂಧೆ ಅವರು ನೂತನ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಸಚಿವ ಸಂಪುಟದ ಮೊದಲ ಸಭೆಯನ್ನು ನಡೆಸಿದರು.</p>.<p>ವಿಧಾನಸಭೆಯ ವಿಶೇಷ ಅಧಿವೇಶವನ್ನು ಜುಲೈ 2 ಮತ್ತು 3ರಂದು ನಡೆಸುವ ನಿರ್ಧಾರವನ್ನು ಈ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಅಧಿವೇಶನದ ಮೊದಲ ದಿನ ಸ್ಪೀಕರ್ ಆಯ್ಕೆ ನಡೆಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಮೊದಲ ದಿನವೇ ಮುಖ್ಯಮಂತ್ರಿ ಶಿಂಧೆ ಅವರು ವಿಶ್ವಾಸಮತ ಯಾಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆಯಾದರೂ, ಈ ಕುರಿತು ಅಧಿಕೃತ ಮಾಹಿತಿ ಇಲ್ಲ.</p>.<p>‘ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಬೇಕು. ಈ ದಿಸೆಯಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂಬುದಾಗಿ ಶಿಂಧೆ ಅವರು ಸಭೆಯಲ್ಲಿ ಸೂಚಿಸಿದರು’ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅನುಭವಿಯಾಗಿದ್ದು, ನಮ್ಮ ಸಂಪುಟದಲ್ಲಿ ಇರುವುದು ಆಡಳಿತಾತ್ಮಕವಾಗಿ ನನಗೆ ನೆರವಾಗುವುದು’ ಎಂದೂ ಅವರು ಹೇಳಿದ್ದಾಗಿ ಪ್ರಕಟಣೆ ತಿಳಿಸಿದೆ.</p>.<p>‘ಆಡಳಿತಾತ್ಮಕ ನಿರ್ಧಾರಗಳನ್ನು ತ್ವರಿತವಾಗಿ ತೆಗೆದುಕೊಳ್ಳುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ನೀಡಬೇಕು’ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜ್ಯದಲ್ಲಿ ಬಿತ್ತನೆ ಕಾರ್ಯದ ಪ್ರಗತಿ ಬಗ್ಗೆಯೂ ಶಿಂಧೆ ಹಾಗೂ ಫಡಣವೀಸ್ ಅವರು ಮಾಹಿತಿ ಪಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>:ಏಕನಾಥ ಶಿಂಧೆ ಅವರು ನೂತನ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಸಚಿವ ಸಂಪುಟದ ಮೊದಲ ಸಭೆಯನ್ನು ನಡೆಸಿದರು.</p>.<p>ವಿಧಾನಸಭೆಯ ವಿಶೇಷ ಅಧಿವೇಶವನ್ನು ಜುಲೈ 2 ಮತ್ತು 3ರಂದು ನಡೆಸುವ ನಿರ್ಧಾರವನ್ನು ಈ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಅಧಿವೇಶನದ ಮೊದಲ ದಿನ ಸ್ಪೀಕರ್ ಆಯ್ಕೆ ನಡೆಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಮೊದಲ ದಿನವೇ ಮುಖ್ಯಮಂತ್ರಿ ಶಿಂಧೆ ಅವರು ವಿಶ್ವಾಸಮತ ಯಾಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆಯಾದರೂ, ಈ ಕುರಿತು ಅಧಿಕೃತ ಮಾಹಿತಿ ಇಲ್ಲ.</p>.<p>‘ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಬೇಕು. ಈ ದಿಸೆಯಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂಬುದಾಗಿ ಶಿಂಧೆ ಅವರು ಸಭೆಯಲ್ಲಿ ಸೂಚಿಸಿದರು’ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅನುಭವಿಯಾಗಿದ್ದು, ನಮ್ಮ ಸಂಪುಟದಲ್ಲಿ ಇರುವುದು ಆಡಳಿತಾತ್ಮಕವಾಗಿ ನನಗೆ ನೆರವಾಗುವುದು’ ಎಂದೂ ಅವರು ಹೇಳಿದ್ದಾಗಿ ಪ್ರಕಟಣೆ ತಿಳಿಸಿದೆ.</p>.<p>‘ಆಡಳಿತಾತ್ಮಕ ನಿರ್ಧಾರಗಳನ್ನು ತ್ವರಿತವಾಗಿ ತೆಗೆದುಕೊಳ್ಳುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ನೀಡಬೇಕು’ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜ್ಯದಲ್ಲಿ ಬಿತ್ತನೆ ಕಾರ್ಯದ ಪ್ರಗತಿ ಬಗ್ಗೆಯೂ ಶಿಂಧೆ ಹಾಗೂ ಫಡಣವೀಸ್ ಅವರು ಮಾಹಿತಿ ಪಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>