ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾವು (ಬಾಳಾಸಾಹೇಬ್ ಬಣ) ಪ್ರೊ.ಜೋಗೇಂದ್ರ ಕವಾಡೆ ನಾಯಕತ್ವದ ಪೀಪಲ್ಸ್ ರಿಪಬ್ಲಿಕನ್ ಪಾರ್ಟಿ (ಪಿಆರ್ಪಿ) ಜೊತೆ ಮೈತ್ರಿ ಮಾಡಿಕೊಂಡಿದೆ.
ಅಂಬೇಡ್ಕರ್ ಅವರ ಮರಿಮೊಮ್ಮಗ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ ಬಹುಜನ ಆಘಾಡಿ (ವಿಬಿಎ) ಜೊತೆ ಉದ್ಧವ್ ಠಾಕ್ರೆ ಅವರು ಇತ್ತೀಚೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ, ಪಿಆರ್ಪಿ ಮತ್ತು ಶಿವಸೇನಾ (ಬಾಳಾಸಾಹೇಬ್ ಬಣ) ನಡುವೆ ಮೈತ್ರಿ ಏರ್ಪಟ್ಟಿರುವುದಕ್ಕೆ ಮಹತ್ವ ಬಂದಿದೆ.
ಆದರೆ, ವಿಬಿಎ ಜೊತೆಗಿನ ಮೈತ್ರಿ ಬಗ್ಗೆ ಮಹಾವಿಕಾಸ್ ಆಘಾಡಿ (ಎಂವಿಎ) ಅಂಗಪಕ್ಷಗಳಾದ ಕಾಂಗ್ರೆಸ್ ಹಾಗೂ ಎನ್ಸಿಪಿ ಈ ವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ವಿಬಿಎ ಕೂಡ ಮಹಾವಿಕಾಸ್ ಆಘಾಡಿಯ ಅಂಗಪಕ್ಷವಾಗಿರಲಿದೆಯೇ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ ಎಂದು ಮೂಲಗಳು ಹೇಳಿವೆ.