ಕೃಷಿ ಮಸೂದೆಗೆ ಶಿರೋಮಣಿ ಅಕಾಲಿ ದಳ ವಿರೋಧ ವ್ಯಕ್ತಪಡಿಸಿದ್ದು, ಅದೇ ವಿಚಾರವಾಗಿ ಪಕ್ಷದ ನಾಯಕಿ ಹರ್ಸಿಮ್ರತ್ ಕೌರ್ ಕೇಂದ್ರ ಸಚಿವ ಸ್ಥಾನಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ್ದರು.
ಎನ್ಡಿಎ ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿರುವುದಾಗಿ ಪಕ್ಷದ ಅಧ್ಯಕ್ಷ ಸುಖ್ಬಿರ್ ಸಿಂಗ್ ಬಾದಲ್ ಶನಿವಾರ ಹೇಳಿದ್ದಾರೆ. ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.
ರೈತರ ಬೆಳೆ ಕನಿಷ್ಠ ಬೆಂಬಲ ಬೆಲೆ ನಿಗದಿಯ ಬಗ್ಗೆ ಕೇಂದ್ರ ಸರ್ಕಾರ ಖಾತರಿ ನೀಡದಿರುವುದು ಹಾಗೂ ಪಂಜಾಬ್ ಮತ್ತು ಸಿಖ್ ಸಂಬಂಧಿತ ವಿಚಾರಗಳಲ್ಲಿ ಸೂಕ್ತ ಪ್ರತಿಕ್ರಿಯೆ ತೋರದ ಕಾರಣಗಳಿಂದಾಗಿ ಶಿರೋಮಣಿ ಅಕಾಲಿ ದಳ ಈ ನಿರ್ಧಾರ ಕೈಗೊಂಡಿರುವುದಾಗಿ ಎಎನ್ಐ ವರದಿ ಮಾಡಿದೆ.
ಶಿವಸೇನಾ ಮತ್ತು ಟಿಡಿಪಿ ನಂತರ ಎನ್ಡಿಎ ಕೂಟದಿಂದ ಹೊರ ಬರುತ್ತಿರುವ ಪ್ರಮುಖ ಪಕ್ಷ ಎಸ್ಎಡಿ. ಇದು ಬಿಜೆಪಿಯ ಅತ್ಯಂತ ಹಳೆಯ ಮೈತ್ರಿ ಪಕ್ಷವೂ ಆಗಿದೆ.
Shiromani Akali Dal (SAD) has decided to pull out of BJP-led NDA alliance because of the centre’s stubborn refusal to give statutory legislative guarantees to protect assured marketing of farmers crops on MSP & its continued insensitivity to Punjabi & Sikh issues: SAD pic.twitter.com/lC3xHczDm2