ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರವು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸಲಿ: ಶಿವಸೇನಾ

Last Updated 2 ಡಿಸೆಂಬರ್ 2020, 10:05 IST
ಅಕ್ಷರ ಗಾತ್ರ

ಮುಂಬೈ: ಶಬ್ಧ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ತಡೆಯಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಶಿವಸೇನಾ ಆಗ್ರಹಿಸಿದೆ.

ಕೇಂದ್ರ ಸರ್ಕಾರವು ಶಬ್ಧ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಿ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು ಎಂದುಶಿವಸೇನಾದ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಲಾಗಿದೆ.

ಶಿವಸೇನಾದ ದಕ್ಷಿಣ ಮುಂಬೈ ವಿಭಾಗದ ಮುಖ್ಯಸ್ಥ ಪಾಂಡುರಂಗ ಸಕ್ಪಾಲ್ ಅವರು ಮುಸ್ಲಿಂ ಮಕ್ಕಳಿಗಾಗಿ ‘ಅಜಾನ್‌’ ವಾಚನ ಸ್ಪರ್ಧೆಯನ್ನು ಏರ್ಪಡಿಸುವಂತೆ ಸಲಹೆ ನೀಡಿದ್ದರು. ಇದಕ್ಕೆ ಬಿಜೆಪಿಯಿಂದ ಭಾರೀ ಟೀಕೆ ವ್ಯಕ್ತವಾಗಿತ್ತು.

ಶಿವಸೇನಾ ನಾಯಕ ‘ಅಜಾನ್‌’ ಬಗ್ಗೆ ಹೊಗಳಿದ್ದು ಮತ್ತು ದೆಹಲಿಯ ಗಡಿಯಲ್ಲಿ ಪ್ರತಿಭಟಿಸಿದ ರೈತರನ್ನು ‘ಪಾಕಿಸ್ತಾನದ ಉಗ್ರರಿಗೆ’ ಹೋಲಿಸಿದ ಬಿಜೆಪಿ ನಡೆ ಎರಡೂ ಒಂದೇ ರೀತಿಯದ್ದು ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT