ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಜತೆ ಉತ್ತರ ಪ್ರದೇಶ ಪೊಲೀಸರ ವರ್ತನೆ ಖಂಡಿಸಿದ ಶಿವಸೇನಾ

Last Updated 2 ಅಕ್ಟೋಬರ್ 2020, 10:42 IST
ಅಕ್ಷರ ಗಾತ್ರ

ಮುಂಬೈ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಗುರುವಾರ ಹಾಥರಸ್‌ಗೆ ಹೊರಟಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯನ್ನು ತಡೆದು, ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸರ ನಡೆಯನ್ನು ಶಿವಸೇನಾ ಖಂಡಿಸಿದೆ.

ಈ ವಿಚಾರವಾಗಿ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಶಿವಸೇನಾ ಮುಖಂಡ ಸಂಜಯ್‌ ರಾವತ್‌, 'ನಾವು ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ, ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕರಾಗಿದ್ದಾರೆ. ಅವರೊಂದಿಗೆ ಉತ್ತರ ಪ್ರದೇಶ ಪೊಲೀಸರು ನಡೆದುಕೊಂಡಿರುವ ರೀತಿಯನ್ನು ನಾವು ಎಂದಿಗೂ ಬೆಂಬಲಿಸುವುದಿಲ್ಲ. ಅವರ ಅಂಗಿಯ ಕೊಳಪಟ್ಟಿಯನ್ನು ಹಿಡಿದು, ನೆಲಕ್ಕೆ ತಳ್ಳಲಾಯಿತು. ಇದು ಒಂದು ರೀತಿಯಲ್ಲಿ ದೇಶದ ಪ್ರಜಾಪ್ರಭುತ್ವದ ಮೇಲೆ ನಡೆದ ಸಾಮೂಹಿಕ ದೌರ್ಜನ್ಯವಾಗಿದೆ,' ಎಂದು ರಾವತ್‌ ಕಿಡಿಕಾರಿದ್ದಾರೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹಾಥರಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT