ನವದೆಹಲಿ: ರಾಜ್ಯಸಭಾ ಸಂಸದ ಹಾಗೂ ಶಿವಸೇನಾದ ನಾಯಕ ಸಂಜಯ್ ರಾವುತ್ ಅವರಿಗೆ ಪಾತಕಿ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಸಂಜಯ್ ರಾವುತ್ ಅವರಿಗೆ ಬೆದರಿಕೆ ಸಂದೇಶ ರವಾನಿಸಿದ್ದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಚಾರಣೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯಲ್ಲಿ ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ನಾಯಕನನ್ನು ಎಕೆ-47 ರೈಫಲ್ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗುವುದು ಎಂದು ಸಂಜಯ್ ರಾವುತ್ ಅವರಿಗೆ ಬೆದರಿಕೆ ಹಾಕಲಾಗಿತ್ತು.
ಇ-ಮೇಲ್ ಸಂದೇಶವನ್ನು ಗಮನಿಸಿದ ರಾವುತ್, ಮುಂಬೈ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದರು.
ಪ್ರಕರಣ ಸಂಬಂಧ ಮುಂಬೈ ಪೊಲೀಸರು ಭಾರತೀಯ ದಂಡ ಸಂಹಿತೆ 120-ಬಿ (ಕ್ರಿಮಿನಲ್ ಪಿತೂರಿ), 506-II (ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
‘ನನಗೆ ಬೆದರಿಕೆ ಸಂದೇಶ ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ನಾನು ಹೆದರುವುದಿಲ್ಲ. ನನ್ನ ಮೇಲೆ ಹಲ್ಲೆ ನಡೆಸಲು ಇದೇ ರೀತಿಯ ಪ್ರಯತ್ನಗಳು ನಡೆದಿವೆ. ಆದರೆ, ಪೊಲೀಸರು ಏನು ಮಾಡಿದರು. ರಾಜ್ಯದ ಗೃಹ ಸಚಿವರು ಯಾವ ಕ್ರಮ ಕೈಗೊಂಡರು’ ಎಂದು ರಾವುತ್ ಪ್ರಶ್ನಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.