<p><strong>ಮುಂಬೈ: </strong>'ನಾನುಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಜಾರಿ ನಿರ್ದೇಶನಾಲಯವು ನನ್ನ ವಿರುದ್ಧ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿ ಕ್ರಮ ಕೈಗೊಂಡಿದೆ. ಸತ್ತರೂಶರಣಾಗುವುದಿಲ್ಲ. ಪಕ್ಷವನ್ನು ಬಿಟ್ಟುಹೋಗುವುದಿಲ್ಲ' ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.</p>.<p>ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ) ಸಂಜಯ್ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಇದರ ಬೆನ್ನಲ್ಲೇ ಸಂಜಯ್ ಸರಣಿ ಟ್ವೀಟ್ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/ed-detains-shiv-sena-leader-sanjay-raut-in-land-scam-case-959171.html" itemprop="url" target="_blank">ಭೂ ಹಗರಣ: ಶಿವಸೇನಾ ನಾಯಕ ಸಂಜಯ್ ರಾವುತ್ ಇ.ಡಿ ವಶಕ್ಕೆ </a></p>.<p>ನಾನು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಶಿವಸೇನಾ ಮುಖ್ಯಸ್ಥ ಬಾಬಾ ಸಾಹೇಬ್ ಠಾಕ್ರೆ ಅವರ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದ ನಾನುಈ ಮಾತನ್ನು ಹೇಳುತ್ತಿದ್ದೇನೆ. ಬಾಳಾ ಸಾಹೇಬರು ನಮಗೆ ಹೋರಾಡುವುದನ್ನು ಕಲಿಸಿದ್ದಾರೆ. ನಾನು ಶಿವಸೇನಾ ಪಕ್ಷಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ' ಎಂದು ತಿಳಿಸಿದ್ದಾರೆ.</p>.<p><strong>ಇ.ಡಿ ವಶಕ್ಕೆ ರಾವುತ್</strong><br />ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವುತ್ ಅವರನ್ನು ಇ.ಡಿ ವಶಕ್ಕೆ ಪಡೆದಿದೆ. ಅವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಹಣವನ್ನು ವಶಪಡಿಸಿಕೊಂಡಿದೆ.</p>.<p>ಮೂಲಗಳ ಪ್ರಕಾರ ₹11.50 ಲಕ್ಷ ರೂಪಾಯಿ ಅಕ್ರಮ ನಗದು ಹಣವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.</p>.<p>₹1,034 ಕೋಟಿ ಮೊತ್ತದ ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಭಾನುವಾರ ಬೆಳಿಗ್ಗೆಯೇ ರಾವುತ್ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಹಲವು ಗಂಟೆಗಳ ಕಾಲ ಶೋಧ ನಡೆಸಿದ ಬಳಿಕ ರಾವುತ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ವಿಚಾರಣೆ ಮುಂದುವರೆದಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/ed-seizes-115-lakh-unaccounted-cash-from-raut-residence-959227.html" itemprop="url" target="_blank">ಇ.ಡಿ ಇಕ್ಕಳದಲ್ಲಿ ಶಿವಸೇನಾದ ಸಂಜಯ್ ರಾವುತ್: ಮನೆಯಲ್ಲಿ ಅಪಾರ ಪ್ರಮಾಣದ ನಗದು ವಶ </a></p>.<p>ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾದ ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್ ಅವರಿಗೆ ಜುಲೈ 20 ಮತ್ತು 27 ರಂದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ನೀಡಲಾಗಿತ್ತು.</p>.<p>ರಾಜ್ಯಸಭಾ ಸಂಸದರೂ ಆಗಿರುವ ರಾವುತ್ ಅವರು ಇ.ಡಿ ಸೂಚಿಸಿದ ದಿನಾಂಕದಂದು ಹಾಜರಾಗಲು ಸಾಧ್ಯವಿಲ್ಲ ಎಂದು ಅವರ (ಸಂಜಯ್ ರಾವುತ್) ಪರವಾಗಿ ವಕೀಲರು ಲಿಖಿತ ಉತ್ತರದಲ್ಲಿ ತಿಳಿಸಿದ್ದರು. ಇ.ಡಿ ಅಧಿಕಾರಿಗಳನ್ನು ಭೇಟಿಯಾದ ವಕೀಲರು ಈ ವಿಷಯ ತಿಳಿಸಿದ್ದು, ಆಗಸ್ಟ್ ಮೊದಲ ವಾರದ ಬಳಿಕ ಸಮಯ ನೀಡುವಂತೆ ವಿನಂತಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>'ನಾನುಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಜಾರಿ ನಿರ್ದೇಶನಾಲಯವು ನನ್ನ ವಿರುದ್ಧ ನಕಲಿ ಸಾಕ್ಷ್ಯಗಳನ್ನು ಸೃಷ್ಟಿಸಿ ಕ್ರಮ ಕೈಗೊಂಡಿದೆ. ಸತ್ತರೂಶರಣಾಗುವುದಿಲ್ಲ. ಪಕ್ಷವನ್ನು ಬಿಟ್ಟುಹೋಗುವುದಿಲ್ಲ' ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.</p>.<p>ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ) ಸಂಜಯ್ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಇದರ ಬೆನ್ನಲ್ಲೇ ಸಂಜಯ್ ಸರಣಿ ಟ್ವೀಟ್ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/ed-detains-shiv-sena-leader-sanjay-raut-in-land-scam-case-959171.html" itemprop="url" target="_blank">ಭೂ ಹಗರಣ: ಶಿವಸೇನಾ ನಾಯಕ ಸಂಜಯ್ ರಾವುತ್ ಇ.ಡಿ ವಶಕ್ಕೆ </a></p>.<p>ನಾನು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ. ಶಿವಸೇನಾ ಮುಖ್ಯಸ್ಥ ಬಾಬಾ ಸಾಹೇಬ್ ಠಾಕ್ರೆ ಅವರ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದ ನಾನುಈ ಮಾತನ್ನು ಹೇಳುತ್ತಿದ್ದೇನೆ. ಬಾಳಾ ಸಾಹೇಬರು ನಮಗೆ ಹೋರಾಡುವುದನ್ನು ಕಲಿಸಿದ್ದಾರೆ. ನಾನು ಶಿವಸೇನಾ ಪಕ್ಷಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ' ಎಂದು ತಿಳಿಸಿದ್ದಾರೆ.</p>.<p><strong>ಇ.ಡಿ ವಶಕ್ಕೆ ರಾವುತ್</strong><br />ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವುತ್ ಅವರನ್ನು ಇ.ಡಿ ವಶಕ್ಕೆ ಪಡೆದಿದೆ. ಅವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಹಣವನ್ನು ವಶಪಡಿಸಿಕೊಂಡಿದೆ.</p>.<p>ಮೂಲಗಳ ಪ್ರಕಾರ ₹11.50 ಲಕ್ಷ ರೂಪಾಯಿ ಅಕ್ರಮ ನಗದು ಹಣವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.</p>.<p>₹1,034 ಕೋಟಿ ಮೊತ್ತದ ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಭಾನುವಾರ ಬೆಳಿಗ್ಗೆಯೇ ರಾವುತ್ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಹಲವು ಗಂಟೆಗಳ ಕಾಲ ಶೋಧ ನಡೆಸಿದ ಬಳಿಕ ರಾವುತ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ವಿಚಾರಣೆ ಮುಂದುವರೆದಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/ed-seizes-115-lakh-unaccounted-cash-from-raut-residence-959227.html" itemprop="url" target="_blank">ಇ.ಡಿ ಇಕ್ಕಳದಲ್ಲಿ ಶಿವಸೇನಾದ ಸಂಜಯ್ ರಾವುತ್: ಮನೆಯಲ್ಲಿ ಅಪಾರ ಪ್ರಮಾಣದ ನಗದು ವಶ </a></p>.<p>ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾದ ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್ ಅವರಿಗೆ ಜುಲೈ 20 ಮತ್ತು 27 ರಂದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ನೀಡಲಾಗಿತ್ತು.</p>.<p>ರಾಜ್ಯಸಭಾ ಸಂಸದರೂ ಆಗಿರುವ ರಾವುತ್ ಅವರು ಇ.ಡಿ ಸೂಚಿಸಿದ ದಿನಾಂಕದಂದು ಹಾಜರಾಗಲು ಸಾಧ್ಯವಿಲ್ಲ ಎಂದು ಅವರ (ಸಂಜಯ್ ರಾವುತ್) ಪರವಾಗಿ ವಕೀಲರು ಲಿಖಿತ ಉತ್ತರದಲ್ಲಿ ತಿಳಿಸಿದ್ದರು. ಇ.ಡಿ ಅಧಿಕಾರಿಗಳನ್ನು ಭೇಟಿಯಾದ ವಕೀಲರು ಈ ವಿಷಯ ತಿಳಿಸಿದ್ದು, ಆಗಸ್ಟ್ ಮೊದಲ ವಾರದ ಬಳಿಕ ಸಮಯ ನೀಡುವಂತೆ ವಿನಂತಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>