ಜಾಧವ್ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ.
‘ನನ್ನ ಕ್ಷೇತ್ರದ ಶಿವಸೇನೆ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ನನಗೆ ಸಾಧ್ಯವಾಗುತ್ತಿಲ್ಲ ಎಂದಮೇಲೆ ಸಂಸದನಾಗಿರಲು ನನಗೆ ಯಾವುದೇ ಹಕ್ಕಿಲ್ಲ. ಆದ್ದರಿಂದ, ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ’ ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.