ನವದೆಹಲಿ: ಬೆಂಗಳೂರಿನಲ್ಲಿ ನಡೆದಿದ್ದ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣವನ್ನು ಖಂಡಿಸಿ ಸೋಮವಾರ ಲೋಕಸಭೆಯಲ್ಲಿ ಶಿವಸೇನೆ ಮತ್ತು ಮಹಾರಾಷ್ಟ್ರದ ಇತರೆ ಸಂಸದರು ಪ್ರತಿಭಟಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಪಡಿಸಿದರು.
ಕಲಾಪ ಆರಂಭವಾಗುತ್ತಿದ್ದಂತೆಯೇ ಸಭಾಧ್ಯಕ್ಷರ ಪೀಠದ ಎದುರಿನ ಅಂಗಳಕ್ಕೆ ಧಾವಿಸಿದ ಸಂಸದರು, ಮಸಿ ಬಳಿದಿದ್ದ ಪ್ರಕರಣವನ್ನು ಖಂಡಿಸಿ ಘೋಷಣೆ ಕೂಗಿದರು. ಮಹಾರಾಷ್ಟ್ರ ಸರ್ಕಾರ ಕೂಡಾ ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿತ್ತು.
ಅರವಿಂದ ಸಾವಂತ್ ಮತ್ತು ಶಿವಸೇನೆಯ ಇತರೆ ಸದಸ್ಯರು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ್ದು, ಬೊಮ್ಮಾಯಿ ರಾಜೀನಾಮೆಗೆ ಆಗ್ರಹಪಡಿಸುವ ಭಿತ್ತಿಪತ್ರ ಪ್ರದರ್ಶಿಸಿದರು.