ಪಕ್ಷದ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಈ ವಿಚಾರಗಳನ್ನು ಉಲ್ಲೇಖಿಸಿರುವ ಸೇನಾ, ‘ರೈತರು, ಸಂಘಟನೆಗಳು ಅಥವಾ ಪ್ರತಿಪಕ್ಷಗಳ ಬಳಿ ಚರ್ಚಿಸದೆ ಕೇಂದ್ರ ಸರ್ಕಾರವು ಕೃಷಿಗೆ ಸಂಬಂಧಿತ ಮಸೂದೆಗಳನ್ನು ಮಂಡಿಸಿದೆ. ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅವರ ರಾಜೀನಾಮೆ ಈ ವಿಷಯವನ್ನು ಬಹಿರಂಗಗೊಳಿಸಿದೆ’ ಎಂದು ಹೇಳಿದೆ.