<p class="title"><strong>ಮುಂಬೈ: </strong>ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಒಟ್ಟು 50 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಅನಿಲ್ ದೇಸಾಯಿ ಭಾನುವಾರ ಪ್ರಕಟಿಸಿದರು.</p>.<p class="title">ಚುನಾವಣೆಯಲ್ಲಿ ಶಿವಸೇನೆಯು ಯಾವುದೇ ಪಕ್ಷದ ಜೊತೆಗೆ ಮೈತ್ರಿ ಹೊಂದಿರುವುದಿಲ್ಲ. ನಮ್ಮ ಕಾರ್ಯಕರ್ತರು ಸಾರ್ವಜನಿಕ ಸೇವೆಯಲ್ಲಿ ಸಕ್ರಿಯವಾಗಿರುವ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ತಿಳಿಸಿದರು.</p>.<p class="title">ಬಿಹಾರ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ‘ಕಹಳೆ ಊದುತ್ತಿರುವ ಮನುಷ್ಯ’ ಆಗಿದೆ. ಚುನಾವಣಾ ಆಯೋಗವು ಶಿವಸೇನೆಗೆ ತನ್ನ ಲಾಂಛನ ಬಿಲ್ಲು ಮತ್ತು ಬಾಣ ಬಳಸಲು ಅವಕಾಶ ನೀಡಿಲ್ಲ. ಬಾಣದ ಚಿಹ್ನೆ ಜೆಡಿ (ಯು) ಪಕ್ಷದ್ದಾಗಿರುವುದು ಇದಕ್ಕೆ ಕಾರಣ.</p>.<p>ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಪ್ರಚಾರ ಕಾರ್ಯಕ್ರಮ ಕುರಿತು ಪ್ರಶ್ನಿಸಿದಾಗ, ಪಕ್ಷ ಮತ್ತು ಮುಖ್ಯಮಂತ್ರಿಯೇ ಈ ಕುರಿತು ವಿವರಣೆ ನೀಡಲಿದ್ದಾರೆ ಎಂದು ಅವರು ಪ್ರತಿಕ್ರಿಯಸಿದರು.</p>.<p>ಶಿವಸೇನೆಯು ಬಿಹಾರ ಚುನಾವಣೆಯಲ್ಲಿ ಪ್ರಚಾರ ನಡೆಸಲು ಒಟ್ಟು 22 ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಿ.ಎಂ ಅಲ್ಲದೆ ಅವರ ಪುತ್ರ, ಸಚಿವ ಆದಿತ್ಯ ಠಾಕ್ರೆ ಅವರೂ ಈ ಪಟ್ಟಿಯಲ್ಲಿದ್ದಾರೆ.</p>.<p>ಪಟ್ಟಿಯಲ್ಲಿ ಇರುವ ಇತರೆ ನಾಯಕರೆಂದರೆ ಸುಭಾಷ್ ದೇಸಾಯಿ, ಸಂಜಯ್ ರಾವುತ್, ಅನಿಲ್ ದೇಸಾಯಿ, ವಿನಾಯಕ ರಾವುತ್, ಅರವಿಂದ ಸಾವಂತ್, ಪ್ರಿಯಾಂಕಾ ಚತುರ್ವೇದಿ, ರಾಹುಲ್ ಶೆವಾಲೆ ಮತತು ಕೃಪಾಲ್.</p>.<p>243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 28ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮತ ಎಣಿಕೆ ಪ್ರಕ್ರಿಯೆ ನವೆಂಬರ್ 10ರಂದು ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ: </strong>ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಒಟ್ಟು 50 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಅನಿಲ್ ದೇಸಾಯಿ ಭಾನುವಾರ ಪ್ರಕಟಿಸಿದರು.</p>.<p class="title">ಚುನಾವಣೆಯಲ್ಲಿ ಶಿವಸೇನೆಯು ಯಾವುದೇ ಪಕ್ಷದ ಜೊತೆಗೆ ಮೈತ್ರಿ ಹೊಂದಿರುವುದಿಲ್ಲ. ನಮ್ಮ ಕಾರ್ಯಕರ್ತರು ಸಾರ್ವಜನಿಕ ಸೇವೆಯಲ್ಲಿ ಸಕ್ರಿಯವಾಗಿರುವ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ತಿಳಿಸಿದರು.</p>.<p class="title">ಬಿಹಾರ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ‘ಕಹಳೆ ಊದುತ್ತಿರುವ ಮನುಷ್ಯ’ ಆಗಿದೆ. ಚುನಾವಣಾ ಆಯೋಗವು ಶಿವಸೇನೆಗೆ ತನ್ನ ಲಾಂಛನ ಬಿಲ್ಲು ಮತ್ತು ಬಾಣ ಬಳಸಲು ಅವಕಾಶ ನೀಡಿಲ್ಲ. ಬಾಣದ ಚಿಹ್ನೆ ಜೆಡಿ (ಯು) ಪಕ್ಷದ್ದಾಗಿರುವುದು ಇದಕ್ಕೆ ಕಾರಣ.</p>.<p>ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಪ್ರಚಾರ ಕಾರ್ಯಕ್ರಮ ಕುರಿತು ಪ್ರಶ್ನಿಸಿದಾಗ, ಪಕ್ಷ ಮತ್ತು ಮುಖ್ಯಮಂತ್ರಿಯೇ ಈ ಕುರಿತು ವಿವರಣೆ ನೀಡಲಿದ್ದಾರೆ ಎಂದು ಅವರು ಪ್ರತಿಕ್ರಿಯಸಿದರು.</p>.<p>ಶಿವಸೇನೆಯು ಬಿಹಾರ ಚುನಾವಣೆಯಲ್ಲಿ ಪ್ರಚಾರ ನಡೆಸಲು ಒಟ್ಟು 22 ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಿ.ಎಂ ಅಲ್ಲದೆ ಅವರ ಪುತ್ರ, ಸಚಿವ ಆದಿತ್ಯ ಠಾಕ್ರೆ ಅವರೂ ಈ ಪಟ್ಟಿಯಲ್ಲಿದ್ದಾರೆ.</p>.<p>ಪಟ್ಟಿಯಲ್ಲಿ ಇರುವ ಇತರೆ ನಾಯಕರೆಂದರೆ ಸುಭಾಷ್ ದೇಸಾಯಿ, ಸಂಜಯ್ ರಾವುತ್, ಅನಿಲ್ ದೇಸಾಯಿ, ವಿನಾಯಕ ರಾವುತ್, ಅರವಿಂದ ಸಾವಂತ್, ಪ್ರಿಯಾಂಕಾ ಚತುರ್ವೇದಿ, ರಾಹುಲ್ ಶೆವಾಲೆ ಮತತು ಕೃಪಾಲ್.</p>.<p>243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 28ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮತ ಎಣಿಕೆ ಪ್ರಕ್ರಿಯೆ ನವೆಂಬರ್ 10ರಂದು ಜರುಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>