ಈ ಬಗ್ಗೆ ಟ್ವೀಟ್ ಮಾಡಿರುವ ಶಿವಸೇನಾದ ಮುಖ್ಯ ವಕ್ತಾರ ಮತ್ತು ಸಾಮ್ನಾ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಸಂಜಯ್ ರಾವುತ್ ಅವರು,‘ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿದ ನಂತರ ಶಿವಸೇನಾ ಪಕ್ಷವು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ನಾವು ಆದಷ್ಟು ಬೇಗ ಕೋಲ್ಕತ್ತ ತಲುಪಲಿದ್ದೇವೆ’ ಎಂದಿದ್ದಾರೆ.