ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ, ‘ಇಂದು (ಸೋಮವಾರ) ದಿವಂಗತ ಬಾಳಾ ಸಾಹೇಬ್ ಠಾಕ್ರೆ ಅವರ ಜಯಂತಿ. ನನ್ನ ಅಜ್ಜ ಕೇಶವ್ ಠಾಕ್ರೆ ಹಾಗೂ ಪ್ರಕಾಶ್ ಅಂಬೇಡ್ಕರ್ ಅವರ ಅಜ್ಜ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಕಾಲೀನರು ಹಾಗೂ ಪರಸ್ಪರ ಗೌರವ ಇಟ್ಟುಕೊಂಡವರಾಗಿದ್ದರು. ಸಾಮಾಜಿಕ ಕೆಡುಕುಗಳನ್ನು, ತಪ್ಪು ನಡವಳಿಕೆಗಳನ್ನು ನಿರ್ಮೂಲನೆ ಮಾಡಲು ಜೊತೆಗೂಡಿ ಹೋರಾಡಿದ್ದಾರೆ’ ಎಂದರು.