‘ಈ ಹಿಂದಿನ ಮೈತ್ರಿ ಸರ್ಕಾರದಲ್ಲಿ ಶಿವಸೇನೆಗೆ ಎರಡನೇ ದರ್ಜೆಯ ಸ್ಥಾನಮಾನ ನೀಡಲಾಗಿತ್ತು. ಗುಲಾಮರ ರೀತಿ ನಡೆಸಿಕೊಳ್ಳಲಾಗಿತ್ತು. ನಮ್ಮ ಬೆಂಬಲದೊಡನೆ ಪಡೆದ ಅಧಿಕಾರ ಬಳಸಿ ನಮ್ಮದೇ ಪಕ್ಷವನ್ನು ಮುಗಿಸಲು ಪ್ರಯತ್ನ ನಡೆದಿತ್ತು’ ಎಂದು ಸೇನಾ ಮುಖಂಡ ರಾವುತ್ ಆರೋಪಿಸಿದ್ದಾರೆ. ಉತ್ತರ ಮಹಾರಾಷ್ಟ್ರದ ಜಲಗಾಂವ್ನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.