ಮುರ್ಮು ಅವರ ಗೌರವಾರ್ಥ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಏರ್ಪಡಿಸಿದ್ದ ಔತಣ ಕೂಟದಲ್ಲಿ ಎಸ್ಪಿ ಮೈತ್ರಿ ಪಕ್ಷ ಸುಹೇಲ್ದೇವ್ ಭಾರತೀಯ ಸಮಾಜ್ ಪಾರ್ಟಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭಾರ್ ಮತ್ತು ಶಿವಪಾಲ್ ಯಾದವ್ ಅವರು ಪಾಲ್ಗೊಂಡಿದ್ದರು. ಇದರಿಂದಾಗಿ ಯಶವಂತ ಸಿನ್ಹಾ ಅವರನ್ನು ಬೆಂಬಲಿಸುತ್ತಿರುವ ವಿರೋಧಪಕ್ಷಗಳ ಪಾಳಯದಲ್ಲಿ ಬಿರುಕು ಮೂಡಿದಂತಾಗಿದೆ.