<p><strong>ನವದೆಹಲಿ</strong>: ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿನ ಸೆಕ್ಷನ್ 66ಎ ಆರು ವರ್ಷಗಳ ಹಿಂದೆ ರದ್ದಾಗಿದ್ದರೂ ಅದರ ಅಡಿಯಲ್ಲಿ ಈಗಲೂ ಪ್ರಕರಣಗಳು ದಾಖಲಾಗುತ್ತಿರುವುದನ್ನು ‘ಅಚ್ಚರಿ‘ ಮತ್ತು ‘ಅಘಾತಕಾರಿ‘ ಎಂದಿರುವ ಸುಪ್ರೀಂ ಕೋರ್ಟ್, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.</p>.<p>ಸೆಕ್ಷನ್ 66ಎ ಅಡಿಯಲ್ಲಿ ಪ್ರಕರಣಗಳು ದಾಖಲಾಗುತ್ತಿರುವುದನ್ನು ಪ್ರಶ್ನಿಸಿ, 'ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್' (ಪಿಯುಸಿಎಲ್) ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಆರ್.ಎಫ್.ನರೀಮನ್, ಕೆ.ಎಂ.ಜೋಸೆಫ್ ಮತ್ತು ಬಿ. ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ ನಡೆಸಿತು.</p>.<p>ಸುಪ್ರೀಂಕೋರ್ಟ್, 2015ರಲ್ಲಿ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ 66ಎ ಸೆಕ್ಷನ್ ರದ್ದುಗೊಳಿಸಿ ತೀರ್ಪು ನೀಡಿತ್ತು. ಈಗ ಈ ಸೆಕ್ಷನ್ ಅಡಿ ಪ್ರಕರಣ ದಾಖಲಿಸುವುದು ನಿಮಗೆ ‘ಅದ್ಭುತ‘ ಮತ್ತು ಆಘಾತಕಾರಿ‘ ಎಂದು ಅನ್ನಿಸುತ್ತಿಲ್ಲವೇ‘ ಎಂದು ಪಿಯುಸಿಎಲ್ ಸಂಸ್ಥೆ ಪರ ಹಾಜರಾದ ಹಿರಿಯ ವಕೀಲ ಸಂಜಯ್ ಪಾರಿಖ್ ಅವರನ್ನು ನ್ಯಾಯಪೀಠ ಕೇಳಿತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಪಾರಿಖ್ ಅವರು, ‘ಮಾರ್ಚ್ 24, 2015 ರ ಶ್ರೇಯಾ ಸಿಂಘಾಲ್ ಪ್ರಕರಣದ ತೀರ್ಪು ಕುರಿತು ಎಲ್ಲಾ ರಾಜ್ಯ ಸರ್ಕಾರಗಳು ಪೊಲೀಸ್ ಸಿಬ್ಬಂದಿಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಸುಪ್ರೀಂ ಕೋರ್ಟ್ 2019ರಲ್ಲಿ ಸ್ಪಷ್ಟ ನಿರ್ದೇಶನ ನೀಡಿತ್ತು. ಇದರ ಹೊರತಾಗಿಯೂ, ಈ ಸೆಕ್ಷನ್ ಅಡಿಯಲ್ಲಿ ಸಾವಿರಾರು ಪ್ರಕರಣಗಳು ದಾಖಲಾಗುತ್ತಿವೆ‘ ಎಂದು ವಿವರಿಸಿದರು.</p>.<p>‘ಆ ಸೆಕ್ಷನ್ ಅಡಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯನ್ನು ನಾವು ಗಮನಿಸಿದ್ದೇವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಕ್ರಮ ಕೈಗೊಳ್ಳುತ್ತೇವೆ‘ ಎಂದು ನ್ಯಾಯಪೀಠ ಪಾರಿಖ್ ಅವರಿಗೆ ಭರವಸೆ ನೀಡಿತು.</p>.<p>ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ‘ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಎ – ಅಡಿ ಟಿಪ್ಪಣಿಯಲ್ಲಿ ‘ಈ ನಿಬಂಧನೆಯನ್ನು ರದ್ದುಪಡಿಸಲಾಗಿದೆ‘ ಎಂದು ಬರೆಯಲಾಗಿದೆ. ಆದರೂ ಪೊಲೀಸ್ ಅಧಿಕಾರಿಗಳು ಈ ನಿಬಂಧನೆಯನ್ನು ಗಮನಿಸದೇ, ಪ್ರಕರಣ ದಾಖಲಿಸಿಕೊಳ್ಳುತ್ತಾರೆ. ಹೀಗಾಗಿ, ಈಗ ನಾವು ಸೆಕ್ಷನ್ 66 ಎ ನಂತರ ಕಂಸದಲ್ಲಿ(ಬ್ರಾಕೆಟ್) ಈ ಸೆಕ್ಷನ್ ಅನ್ನು ರದ್ದುಗೊಳಿಸಲಾಗಿದೆ ಎಂದು ನಮೂದಿಸಿ ಅಡಿ ಟಿಪ್ಪಣಿಯಲ್ಲಿ ತೀರ್ಪಿನ ಸಂಪೂರ್ಣ ಸಾರವನ್ನು ಹಾಕಬಹುದು‘ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<p>ನ್ಯಾಯಮೂರ್ತಿ ನರೀಮನ್ ಅವರು, ‘ಈ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ನೀವು ದಯವಿಟ್ಟು ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಿ ಎಂದು ವೇಣುಗೋಪಾಲ್ ಅವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿನ ಸೆಕ್ಷನ್ 66ಎ ಆರು ವರ್ಷಗಳ ಹಿಂದೆ ರದ್ದಾಗಿದ್ದರೂ ಅದರ ಅಡಿಯಲ್ಲಿ ಈಗಲೂ ಪ್ರಕರಣಗಳು ದಾಖಲಾಗುತ್ತಿರುವುದನ್ನು ‘ಅಚ್ಚರಿ‘ ಮತ್ತು ‘ಅಘಾತಕಾರಿ‘ ಎಂದಿರುವ ಸುಪ್ರೀಂ ಕೋರ್ಟ್, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.</p>.<p>ಸೆಕ್ಷನ್ 66ಎ ಅಡಿಯಲ್ಲಿ ಪ್ರಕರಣಗಳು ದಾಖಲಾಗುತ್ತಿರುವುದನ್ನು ಪ್ರಶ್ನಿಸಿ, 'ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್' (ಪಿಯುಸಿಎಲ್) ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಆರ್.ಎಫ್.ನರೀಮನ್, ಕೆ.ಎಂ.ಜೋಸೆಫ್ ಮತ್ತು ಬಿ. ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ ನಡೆಸಿತು.</p>.<p>ಸುಪ್ರೀಂಕೋರ್ಟ್, 2015ರಲ್ಲಿ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ 66ಎ ಸೆಕ್ಷನ್ ರದ್ದುಗೊಳಿಸಿ ತೀರ್ಪು ನೀಡಿತ್ತು. ಈಗ ಈ ಸೆಕ್ಷನ್ ಅಡಿ ಪ್ರಕರಣ ದಾಖಲಿಸುವುದು ನಿಮಗೆ ‘ಅದ್ಭುತ‘ ಮತ್ತು ಆಘಾತಕಾರಿ‘ ಎಂದು ಅನ್ನಿಸುತ್ತಿಲ್ಲವೇ‘ ಎಂದು ಪಿಯುಸಿಎಲ್ ಸಂಸ್ಥೆ ಪರ ಹಾಜರಾದ ಹಿರಿಯ ವಕೀಲ ಸಂಜಯ್ ಪಾರಿಖ್ ಅವರನ್ನು ನ್ಯಾಯಪೀಠ ಕೇಳಿತು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಪಾರಿಖ್ ಅವರು, ‘ಮಾರ್ಚ್ 24, 2015 ರ ಶ್ರೇಯಾ ಸಿಂಘಾಲ್ ಪ್ರಕರಣದ ತೀರ್ಪು ಕುರಿತು ಎಲ್ಲಾ ರಾಜ್ಯ ಸರ್ಕಾರಗಳು ಪೊಲೀಸ್ ಸಿಬ್ಬಂದಿಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಸುಪ್ರೀಂ ಕೋರ್ಟ್ 2019ರಲ್ಲಿ ಸ್ಪಷ್ಟ ನಿರ್ದೇಶನ ನೀಡಿತ್ತು. ಇದರ ಹೊರತಾಗಿಯೂ, ಈ ಸೆಕ್ಷನ್ ಅಡಿಯಲ್ಲಿ ಸಾವಿರಾರು ಪ್ರಕರಣಗಳು ದಾಖಲಾಗುತ್ತಿವೆ‘ ಎಂದು ವಿವರಿಸಿದರು.</p>.<p>‘ಆ ಸೆಕ್ಷನ್ ಅಡಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯನ್ನು ನಾವು ಗಮನಿಸಿದ್ದೇವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಕ್ರಮ ಕೈಗೊಳ್ಳುತ್ತೇವೆ‘ ಎಂದು ನ್ಯಾಯಪೀಠ ಪಾರಿಖ್ ಅವರಿಗೆ ಭರವಸೆ ನೀಡಿತು.</p>.<p>ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ‘ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಎ – ಅಡಿ ಟಿಪ್ಪಣಿಯಲ್ಲಿ ‘ಈ ನಿಬಂಧನೆಯನ್ನು ರದ್ದುಪಡಿಸಲಾಗಿದೆ‘ ಎಂದು ಬರೆಯಲಾಗಿದೆ. ಆದರೂ ಪೊಲೀಸ್ ಅಧಿಕಾರಿಗಳು ಈ ನಿಬಂಧನೆಯನ್ನು ಗಮನಿಸದೇ, ಪ್ರಕರಣ ದಾಖಲಿಸಿಕೊಳ್ಳುತ್ತಾರೆ. ಹೀಗಾಗಿ, ಈಗ ನಾವು ಸೆಕ್ಷನ್ 66 ಎ ನಂತರ ಕಂಸದಲ್ಲಿ(ಬ್ರಾಕೆಟ್) ಈ ಸೆಕ್ಷನ್ ಅನ್ನು ರದ್ದುಗೊಳಿಸಲಾಗಿದೆ ಎಂದು ನಮೂದಿಸಿ ಅಡಿ ಟಿಪ್ಪಣಿಯಲ್ಲಿ ತೀರ್ಪಿನ ಸಂಪೂರ್ಣ ಸಾರವನ್ನು ಹಾಕಬಹುದು‘ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<p>ನ್ಯಾಯಮೂರ್ತಿ ನರೀಮನ್ ಅವರು, ‘ಈ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ನೀವು ದಯವಿಟ್ಟು ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಿ ಎಂದು ವೇಣುಗೋಪಾಲ್ ಅವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>