ನವದೆಹಲಿ: ರೋಹಿಣಿ ಕೋರ್ಟ್ ಆವರಣದಲ್ಲಿ ಶುಕ್ರವಾರ ಶೂಟೌಟ್ ನಡೆದಿದೆ. ವಕೀಲರ ಉಡುಪಿನಲ್ಲಿ ಬಂದಿದ್ದ ಗ್ಯಾಂಗ್ಸ್ಟರ್ಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗ್ಯಾಂಗ್ಸ್ಟರ್ಜಿತೇಂದ್ರ ಗೋಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ಯಾಂಗ್ಸ್ಟರ್ ಜಿತೇಂದರ್ ಗೋಗಿ ಅವರನ್ನು ಗುರಿಯಾಗಿಸಿಕೊಂಡು ಗುಂಪೊಂದುಈ ದಾಳಿ ನಡೆಸಿದೆ. ಶೂಟೌಟ್ನಲ್ಲಿ ಗೋಗಿಸಾವಿಗೀಡಾಗಿದ್ದಾನೆ.
ವಕೀಲರ ಉಡುಪು ಧರಿಸಿ ಬಂದು ದಾಳಿ ಆರಂಭಿಸಿದ ದುಷ್ಕರ್ಮಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದರೋಡೆಕೋರ ಗೋಗಿಯನ್ನು ನ್ಯಾಯಾಲಯಕ್ಕೆಕರೆದೊಯ್ಯುವಾಗ ಆತನ ಮೇಲೆಇಬ್ಬರು ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿಪೊಲೀಸರೂ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗೋಗಿ ಮತ್ತು ಇಬ್ಬರು ದಾಳಿಕೋರರು ಮೃತಪಟ್ಟಿದ್ದಾರೆ. ಅದರಲ್ಲಿ ಒಬ್ಬಾತ ಹಲವು ಪ್ರಕರಣಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ಹಿಡಿದುಕೊಟ್ಟರಿಗೆ ₹50 ಸಾವಿರ ಬಹುಮಾನ ಘೋಷಣೆಯಾಗಿತ್ತು ಎಂದುದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ಥಾನಾ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.