ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಶಬರಿಮಲೆ ಕುರಿತ ಸಿನಿಮಾ ಹೊಗಳಿದ್ದಕ್ಕೆ ಅಂಗಡಿ ದ್ವಂಸ!

Last Updated 4 ಜನವರಿ 2023, 11:08 IST
ಅಕ್ಷರ ಗಾತ್ರ

ಮಲಪ್ಪುರ (ಕೇರಳ): ಅಯ್ಯಪ್ಪ ಸ್ವಾಮಿ ಕುರಿತ ಚಲನಚಿತ್ರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೊಗಳಿ ಹಾಕಿದ್ದ ಪೋಸ್ಟ್‌ಗಳ ಬಗ್ಗೆ ಆಕ್ರೋಶಗೊಂಡ ಕೆಲವರು ಸಿಪಿಐ ಸ್ಥಳೀಯ ಮುಖಂಡ ಸಿ.ಪ್ರಗಿಲೇಶ್‌ ಒಡೆತನದ ಅಂಗಡಿಯನ್ನು ಧ್ವಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಉನ್ನಿ ಮುಕುಂದನ್‌ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಮಲಿಕಪ್ಪುರಂ’ ಚಿತ್ರವನ್ನು ಹೊಗಳಿ ಸಾಮಾಜಿಕ ಜಾಲತಾಣದಲ್ಲಿ ಕೆಲ ಪೋಸ್ಟ್‌ಗಳನ್ನು ಹಂಚಿಕೊಂಡ ನಂತರ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆಗಳು ನಡೆದಿತ್ತು. ಕೆಲವರು ಅಂಗಡಿ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಪ್ರಗಿಲೇಶ್ ಆರೋಪಿಸಿದ್ದಾರೆ.

ಕೇರಳದ ಮಲಪ್ಪುರ ಜಿಲ್ಲೆಯಲ್ಲಿರುವ ಪ್ರಗಿಲೇಶ್‌ ಅವರ ಧ್ವನಿವರ್ಧಕ ಅಂಗಡಿ ಮೇಲೆ ಜ.1ರಂದು ದಾಳಿ ನಡೆದಿದ್ದು, ಅಂಗಡಿಯಲ್ಲಿ ಇರಿಸಲಾಗಿದ್ದ ಹೊಸದಾಗಿ ತರಿಸಿದ್ದ ಬೋರ್ಡ್‌, ಅಲಂಕಾರಿಕ ದೀಪಗಳು ಹಾನಿಗೊಳಗಾಗಿವೆ. ಆಸ್ತಿ ನಾಶ ಕುರಿತು ಮಂಗಳವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT