<p class="title"><strong>ಶೋಪಿಯಾನ್: </strong>ಕಳೆದ ಜುಲೈನಲ್ಲಿ ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದಿದ್ದ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಸೇನಾ ಕ್ಯಾಪ್ಟನ್ ಭಾಗಿಯಾಗಿದ್ದು, ಇವರು ಮತ್ತು ಇನ್ನಿಬ್ಬರು ನಾಗರಿಕರು ಸಾಕ್ಷ್ಯ ನಾಶ ಪಡೆಸಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಆರೋಪಪಟ್ಟಿ ಸಲ್ಲಿಸಲಾಗಿದೆ.</p>.<p class="title">ಕ್ಯಾಪ್ಟನ್ ಭೂಪೇಂದ್ರ ಸಿಂಗ್ ಇದರ ಜೊತೆಗೆ ತನ್ನ ಮೇಲಧಿಕಾರಿಗಳಿಗೆ, ದಾಳಿ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾದ ಪರಿಕರಗಳ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ವಿಶೇಷ ತನಿಖಾ ಸಂಸ್ಥೆ (ಎಸ್ಐಟಿ) ಆರೋಪಪಟ್ಟಿಯಲ್ಲಿ ದಾಖಲಿಸಿದೆ.</p>.<p class="title">2020ರ ಜುಲೈ 18 ರಂದು ಶೋಪಿಯಾನ್ನ ಅಂಶಿಪುರದಲ್ಲಿ ಎನ್ಕೌಂಟರ್ ನಡೆದಿತ್ತು. ಇದರಲ್ಲಿ ಮೂವರು ಯುವಕರು ಮೃತಪಟ್ಟಿದ್ದು, ಅವರನ್ನು ಭಯೋತ್ಪಾದಕರು ಎಂದು ಬಿಂಬಿಸಲಾಗಿತ್ತು. ಮೂವರು ಯುವಕರು ಅಮಾಯಕರು ಎಂಬ ಅಂಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಸೇನೆಯು ತನಿಖೆಗೆ ಆದೇಶಿಸಿತ್ತು.</p>.<p>ಶವಗಳ ಬಳಿ ಇರಿಸಲಾಗಿದ್ದ ಶಸ್ತ್ರಾಸ್ತ್ರಗಳನ್ನು ಕಾನೂನುಬಾಹಿರವಾಗಿ ವ್ಯವಸ್ಥೆ ಮಾಡಿಕೊಂಡಿದ್ದು, ಅದರ ಮೂಲ ತಿಳಿದುಬಂದಿಲ್ಲ ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶೋಪಿಯಾನ್: </strong>ಕಳೆದ ಜುಲೈನಲ್ಲಿ ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದಿದ್ದ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಸೇನಾ ಕ್ಯಾಪ್ಟನ್ ಭಾಗಿಯಾಗಿದ್ದು, ಇವರು ಮತ್ತು ಇನ್ನಿಬ್ಬರು ನಾಗರಿಕರು ಸಾಕ್ಷ್ಯ ನಾಶ ಪಡೆಸಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಆರೋಪಪಟ್ಟಿ ಸಲ್ಲಿಸಲಾಗಿದೆ.</p>.<p class="title">ಕ್ಯಾಪ್ಟನ್ ಭೂಪೇಂದ್ರ ಸಿಂಗ್ ಇದರ ಜೊತೆಗೆ ತನ್ನ ಮೇಲಧಿಕಾರಿಗಳಿಗೆ, ದಾಳಿ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾದ ಪರಿಕರಗಳ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ನ ವಿಶೇಷ ತನಿಖಾ ಸಂಸ್ಥೆ (ಎಸ್ಐಟಿ) ಆರೋಪಪಟ್ಟಿಯಲ್ಲಿ ದಾಖಲಿಸಿದೆ.</p>.<p class="title">2020ರ ಜುಲೈ 18 ರಂದು ಶೋಪಿಯಾನ್ನ ಅಂಶಿಪುರದಲ್ಲಿ ಎನ್ಕೌಂಟರ್ ನಡೆದಿತ್ತು. ಇದರಲ್ಲಿ ಮೂವರು ಯುವಕರು ಮೃತಪಟ್ಟಿದ್ದು, ಅವರನ್ನು ಭಯೋತ್ಪಾದಕರು ಎಂದು ಬಿಂಬಿಸಲಾಗಿತ್ತು. ಮೂವರು ಯುವಕರು ಅಮಾಯಕರು ಎಂಬ ಅಂಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಸೇನೆಯು ತನಿಖೆಗೆ ಆದೇಶಿಸಿತ್ತು.</p>.<p>ಶವಗಳ ಬಳಿ ಇರಿಸಲಾಗಿದ್ದ ಶಸ್ತ್ರಾಸ್ತ್ರಗಳನ್ನು ಕಾನೂನುಬಾಹಿರವಾಗಿ ವ್ಯವಸ್ಥೆ ಮಾಡಿಕೊಂಡಿದ್ದು, ಅದರ ಮೂಲ ತಿಳಿದುಬಂದಿಲ್ಲ ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>