ಸಿಜೆಐ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದ ಉನ್ನತ ನ್ಯಾಯಾಂಗ ಸೇವೆಗಳ (ಎಚ್ಜೆಎಸ್) ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳ ಅರ್ಜಿಯ ವಿಚಾರಣೆ ನಡೆಸಿತು. ಅರ್ಜಿ ಪುರಸ್ಕರಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಜೆ. ಬಿ. ಪಾರ್ದಿವಾಲಾ ಪೀಠ, ‘ರಾಜಸ್ಥಾನ ಹೈಕೋರ್ಟ್ಗೆ ತೆರಳಲು ಅರ್ಜಿದಾರರಿಗೆ ಮುಕ್ತ ಅವಕಾಶ ನೀಡುತ್ತೇವೆ. ಅಂತಹ ಅರ್ಜಿ ಸಲ್ಲಿಸಿದರೆ ಪೀಠ ರಚಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಕೋರುತ್ತೇವೆ’ ಎಂದು ಹೇಳಿದೆ.