ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ ಹಗರಣದ ಬಗ್ಗೆ ಶುಕ್ಲಾರಿಂದ ಗೌಪ್ಯ ಪತ್ರ ಸೋರಿಕೆ: ಸತ್ಯಶೋಧನಾ ವರದಿ

Last Updated 26 ಮಾರ್ಚ್ 2021, 1:49 IST
ಅಕ್ಷರ ಗಾತ್ರ

ಮುಂಬೈ: ಪೊಲೀಸರ ವರ್ಗಾವಣೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಗೌಪ್ಯ ಪತ್ರವನ್ನು ಐಪಿಎಸ್‌ ಅಧಿಕಾರಿ ರಶ್ಮಿ ಶುಕ್ಲಾ ಅವರೇ ಸೋರಿಕೆ ಮಾಡಿರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೀತಾರಾಂ ಕುಂಟೆ ಅವರು ಸಲ್ಲಿಸಿರುವ ಸತ್ಯಶೋಧನಾ ವರದಿಯಲ್ಲಿ ಹೇಳಲಾಗಿದೆ.

‘ಪೊಲೀಸರ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ಲಾ ಅವರು ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರವೇ ಮುಚ್ಚಿಟ್ಟಿದೆ’ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಇತ್ತೀಚೆಗೆ ಆರೋಪಿಸಿದ್ದರು.

ಈ ಸಂಬಂಧ ವರದಿ ಸಲ್ಲಿಸುವಂತೆ ಕುಂಟೆ ಅವರಿಗೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸೂಚನೆ ನೀಡಿದ್ದರು. ಇತ್ತೀಚಿನ ವರ್ಷಗಳಲ್ಲಿಯೇ ಪೊಲೀಸ್‌ ಇಲಾಖೆಯಲ್ಲಿ ಭಾರಿ ವರ್ಗಾವಣೆ ಮಾಡಲಾಗಿದ್ದು, ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT