<p><strong>ಶ್ರೀನಗರ:</strong> ‘ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಸ್ಥಾಪಕ ಮೊಹಮ್ಮದ್ ಮಕ್ಬೂಲ್ ಭಟ್ ನೇಣಿಗೇರಿದ 37ನೇ ವರ್ಷದ ಸ್ಮರಣೋತ್ಸವದ ಅಂಗವಾಗಿ ಜೆಕೆಎಲ್ಎಫ್ ಸಂಘಟನೆಯುಕಾಶ್ಮೀರದಲ್ಲಿ ಗುರುವಾರ ಬಂದ್ಗೆ ಕರೆ ನೀಡಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಶ್ರೀನಗರದಲ್ಲಿ ಹೆಚ್ಚಿನ ಅಂಗಡಿಗಳು, ಪೆಟ್ರೋಲ್ ಬಂಕ್ಗಳು ಸೇರಿದಂತೆ ಹಲವು ವಾಣಿಜ್ಯ ಮಳಿಗೆಗಳು ಮುಚ್ಚಿವೆ. ಅಲ್ಲದೆ ಸಾರ್ವಜನಿಕ ಸಾರಿಗೆ ಬಸ್ಗಳು ಕೂಡ ರಸ್ತೆಗೆ ಇಳಿದಿಲ್ಲ’ ಎಂದು ಅವರು ಹೇಳಿದರು.</p>.<p>ಆದರೆ ನಗರದಲ್ಲಿ ಖಾಸಗಿ ಕಾರುಗಳು, ಆಟೋ ರಿಕ್ಷಾ ಮತ್ತು ಕ್ಯಾಬ್ಗಳು ಓಡಾಡುತ್ತಿವ ಎಂದು ಅವರು ಮಾಹಿತಿ ನೀಡಿದರು.</p>.<p>‘ಜಮ್ಮು ಮತ್ತು ಕಾಶ್ಮೀರದ ಇತರೆ ಜಿಲ್ಲೆಗಳಲ್ಲೂ ಬಂದ್ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>ಸಂಸತ್ ಭವನದ ಮೇಲಿನ ದಾಳಿಯ ರೂವಾರಿ ಅಫ್ಜಲ್ ಗುರುವನ್ನು ಫೆಬ್ರುವರಿ 23, 2013 ರಂದು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಜೆಕೆಎಲ್ಎಫ್ ಸ್ಥಾಪಕ ಮೊಹಮ್ಮದ್ ಮಕ್ಬೂಲ್ ಭಟ್ನನ್ನು ಫೆಬ್ರುವರಿ 11, 1984 ರಂದು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜೆಕೆಎಲ್ಎಫ್ ಸಂಘಟನೆಯು ಇವರಿಬ್ಬರ ಸ್ಮರಣಾರ್ಥ ಫೆಬ್ರುವರಿ 9 ಮತ್ತು 11 ರಂದು ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಂದ್ಗೆ ಕರೆ ನೀಡಿದೆ.</p>.<p><strong>ಇದನ್ನೂ ಓದಿ...<a href="https://www.prajavani.net/district/bengaluru-city/tall-tomato-plant-curious-at-the-national-gardening-fair-bangalore-804279.html" target="_blank"> ರಾಷ್ಟ್ರೀಯ ತೋಟಗಾರಿಕೆ ಮೇಳದಲ್ಲಿ ಕುತೂಹಲ ಮೂಡಿಸಿದ 10 ಅಡಿ ಎತ್ತರದ ಟೊಮೆಟೊ ಗಿಡ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ‘ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಸ್ಥಾಪಕ ಮೊಹಮ್ಮದ್ ಮಕ್ಬೂಲ್ ಭಟ್ ನೇಣಿಗೇರಿದ 37ನೇ ವರ್ಷದ ಸ್ಮರಣೋತ್ಸವದ ಅಂಗವಾಗಿ ಜೆಕೆಎಲ್ಎಫ್ ಸಂಘಟನೆಯುಕಾಶ್ಮೀರದಲ್ಲಿ ಗುರುವಾರ ಬಂದ್ಗೆ ಕರೆ ನೀಡಿದೆ. ಇದರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಶ್ರೀನಗರದಲ್ಲಿ ಹೆಚ್ಚಿನ ಅಂಗಡಿಗಳು, ಪೆಟ್ರೋಲ್ ಬಂಕ್ಗಳು ಸೇರಿದಂತೆ ಹಲವು ವಾಣಿಜ್ಯ ಮಳಿಗೆಗಳು ಮುಚ್ಚಿವೆ. ಅಲ್ಲದೆ ಸಾರ್ವಜನಿಕ ಸಾರಿಗೆ ಬಸ್ಗಳು ಕೂಡ ರಸ್ತೆಗೆ ಇಳಿದಿಲ್ಲ’ ಎಂದು ಅವರು ಹೇಳಿದರು.</p>.<p>ಆದರೆ ನಗರದಲ್ಲಿ ಖಾಸಗಿ ಕಾರುಗಳು, ಆಟೋ ರಿಕ್ಷಾ ಮತ್ತು ಕ್ಯಾಬ್ಗಳು ಓಡಾಡುತ್ತಿವ ಎಂದು ಅವರು ಮಾಹಿತಿ ನೀಡಿದರು.</p>.<p>‘ಜಮ್ಮು ಮತ್ತು ಕಾಶ್ಮೀರದ ಇತರೆ ಜಿಲ್ಲೆಗಳಲ್ಲೂ ಬಂದ್ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>ಸಂಸತ್ ಭವನದ ಮೇಲಿನ ದಾಳಿಯ ರೂವಾರಿ ಅಫ್ಜಲ್ ಗುರುವನ್ನು ಫೆಬ್ರುವರಿ 23, 2013 ರಂದು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಜೆಕೆಎಲ್ಎಫ್ ಸ್ಥಾಪಕ ಮೊಹಮ್ಮದ್ ಮಕ್ಬೂಲ್ ಭಟ್ನನ್ನು ಫೆಬ್ರುವರಿ 11, 1984 ರಂದು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜೆಕೆಎಲ್ಎಫ್ ಸಂಘಟನೆಯು ಇವರಿಬ್ಬರ ಸ್ಮರಣಾರ್ಥ ಫೆಬ್ರುವರಿ 9 ಮತ್ತು 11 ರಂದು ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಂದ್ಗೆ ಕರೆ ನೀಡಿದೆ.</p>.<p><strong>ಇದನ್ನೂ ಓದಿ...<a href="https://www.prajavani.net/district/bengaluru-city/tall-tomato-plant-curious-at-the-national-gardening-fair-bangalore-804279.html" target="_blank"> ರಾಷ್ಟ್ರೀಯ ತೋಟಗಾರಿಕೆ ಮೇಳದಲ್ಲಿ ಕುತೂಹಲ ಮೂಡಿಸಿದ 10 ಅಡಿ ಎತ್ತರದ ಟೊಮೆಟೊ ಗಿಡ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>