ಸಂಸತ್ ಭವನದ ಮೇಲಿನ ದಾಳಿಯ ರೂವಾರಿ ಅಫ್ಜಲ್ ಗುರುವನ್ನು ಫೆಬ್ರುವರಿ 23, 2013 ರಂದು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಜೆಕೆಎಲ್ಎಫ್ ಸ್ಥಾಪಕ ಮೊಹಮ್ಮದ್ ಮಕ್ಬೂಲ್ ಭಟ್ನನ್ನು ಫೆಬ್ರುವರಿ 11, 1984 ರಂದು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜೆಕೆಎಲ್ಎಫ್ ಸಂಘಟನೆಯು ಇವರಿಬ್ಬರ ಸ್ಮರಣಾರ್ಥ ಫೆಬ್ರುವರಿ 9 ಮತ್ತು 11 ರಂದು ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಂದ್ಗೆ ಕರೆ ನೀಡಿದೆ.