ಅಮರಿಂದರ್ ಸಿಂಗ್ ಅವರು ನೂತನ ಪಕ್ಷ ಸ್ಥಾಪಿಸುವುದಾಗಿ ಇತ್ತೀಚೆಗೆ ಹೇಳಿದ್ದಾರೆ. ಅಲ್ಲದೇ, ರೈತರ ಹಿತಾಸಕ್ತಿ ಕಾಪಾಡುವ ರೀತಿಯಲ್ಲಿ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯನ್ನು ಅಂತ್ಯಗಾಣಿಸಿದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಸ್ಥಾನಗಳ ಹೊಂದಾಣಿಕೆ ಮಾಡಿಕೊಳ್ಳುವ ಸುಳಿವನ್ನೂ ಅವರು ನೀಡಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಸಿಧು ಈ ಟೀಕಾಪ್ರಹಾರ ನಡೆಸಿದ್ದಾರೆ.