ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಿದ್ದನ್ನು ವಿರೋಧಿಸಿ 2015ರಲ್ಲಿ ಪಂಜಾಬ್ನ ಕೋಟಕ್ಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಂಜಾಬ್ ಹರಿಯಾಣ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿತ್ತು. ಈ ತೀರ್ಪಿನ ನಂತರ ಸಿಧು ಅವರು ತಮ್ಮದೇ ಪಕ್ಷದ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿರುದ್ಧ ಬಹಿರಂಗವಾಗಿ ಟೀಕಾ ಪ್ರಹಾರಗಳನ್ನು ಮಾಡಿದ್ದಾರೆ. ಸಿಧು ಅವರ ಟೀಕೆಗೆ ಪ್ರತಿಕ್ರಿಯೆ ನೀಡಿದ್ದ ಸಿಂಗ್, ‘ಸಿಧು ಅವರು ಸಂಪೂರ್ಣ ಅಶಿಸ್ತನ್ನು ಪ್ರದರ್ಶಿಸುತ್ತಿದ್ದಾರೆ, ಬಹುಶಃ ಅವರು ಆಮ್ಆದ್ಮಿ ಪಕ್ಷವನ್ನು ಸೇರುತ್ತಿರಬಹುದು’ ಎಂದಿದ್ದರು.