ಸಿಧು ಹಾಗೂ ಅಮರಿಂದರ್ ನಡುವಣ ಭಿನ್ನಾಭಿಪ್ರಾಯವು ಕಾಂಗ್ರೆಸ್ ಆಂತರಿಕ ಕಲಹಕ್ಕೆ ಕಾರಣವಾಗಿತ್ತು. ಸಿಧು ಅವರು ಟ್ವೀಟ್ ಮೂಲಕ ಅಮರಿಂದರ್ ಸಿಂಗ್ ವಿರುದ್ಧ ಕಟುವಾಗಿ ಟೀಕಿಸಿದ್ದರು. ಇದರಿಂದಾಗಿ ಸಿಧು ಸಾರ್ವಜನಿಕವಾಗಿ ಕ್ಷಮೆಯಾಚಿಸದ ಹೊರತು ಅಮರಿಂದರ್ ಭೇಟಿಯಾಗುವುದಿಲ್ಲ ಎಂದು ಸಿಎಂ ಮಾಧ್ಯಮ ಸಲಹೆಗಾರ ಹೇಳಿಕೆ ನೀಡಿದ್ದರು.
ಗುರುವಾರದಂದು ರಾಜ್ಯ ಕಾಂಗ್ರೆಸ್ ಘಟಕಕ್ಕೆ ಹೊಸದಾಗಿ ನೇಮಕಗೊಂಡ ನಾಲ್ವರು ಕಾರ್ಯಾಧ್ಯಕ್ಷರ ಪೈಕಿ ಕುಲ್ಜಿತ್ ಸಿಂಗ್ ನಾಗ್ರಾ ಮತ್ತು ಸಂಗತ್ ಸಿಂಗ್ ಗಿಲ್ಜಿಯಾನ್ ಅವರು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಅಮರಿಂದರ್ ಸಿಂಗ್ ಅವರನ್ನು ಆಹ್ವಾನಿಸಿದ್ದರು.