<p><strong>ಚಂಡಿಗಡ (ಪಿಟಿಐ):</strong>ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರ ಈಡೇರಿಸಬೇಕಾದ ಜನರ ಆಶೋತ್ತರಗಳನ್ನು ಅದು ಒಳಗೊಂಡಿದೆ.</p>.<p>2022ರ ಪಂಜಾಬ್ ವಿಧಾನಸಭಾ ಚುನಾವಣಾ ಪ್ರಣಾಳಿಕೆಗೂ ಮುನ್ನ, ತಮ್ಮ 13 ಅಂಶಗಳ ಕಾರ್ಯಸೂಚಿಯನ್ನು ಅವರು ಪ್ರಕಟಿಸಿದ್ದಾರೆ. ಈ ಬಗ್ಗೆ ಚರ್ಚಿಸುವುದಕ್ಕಾಗಿ ಸೋನಿಯಾ ಗಾಂಧಿ ಭೇಟಿಗೆ ಅವಕಾಶ ಕೋರಿದ್ದಾರೆ.</p>.<p>ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾದ ಮರುದಿನ ಬರೆದಿರುವ ಪತ್ರದಲ್ಲಿ,‘ಇದು, ಪಂಜಾಬಿನಲ್ಲಿ ಪಕ್ಷದ ಪುನರುಜ್ಜೀವನಕ್ಕೆ ಇರುವ ಕೊನೆಯ ಅವಕಾಶ’ ಎಂದು ಸಿಧು ಉಲ್ಲೇಖಿಸಿದ್ದಾರೆ.</p>.<p>ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿಧು, ತಮ್ಮ ಆತಂಕಗಳನ್ನು ಪರಿಹರಿಸಲಾಗಿದೆ ಎಂದುಅಕ್ಟೋಬರ್ 15ರಂದು ಹೇಳಿದ್ದರು. ಸಿಧು ರಾಜ್ಯ ಘಟಕದ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ ಎಂದು ಪಕ್ಷ ಹೇಳಿತ್ತು. ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಈ ನಿರ್ಧಾರಕ್ಕೆ ಬರಲಾಗಿತ್ತು.</p>.<p>2017ರ ಚುನಾವಣಾ ಪ್ರಚಾರದ ವೇಳೆ ತಯಾರಿಸಿದ್ದ 18 ಅಂಶಗಳ ಕಾರ್ಯಸೂಚಿಯ ಅಂಶಗಳು ಹಾಗೂ ರಾಜ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ರಾಜ್ಯ ಸರ್ಕಾರವು ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಸಿಧು ತಮ್ಮ ಪತ್ರದಲ್ಲಿ ಹೇಳಿದ್ದಾರೆ.</p>.<p>2015ರಲ್ಲಿ ಫರೀದ್ಕೋಟ್ನ ಕೋಟ್ಕಾಪುರ ಮತ್ತು ಬೆಹ್ಬಾಲ್ ಕಲಾನ್ನಲ್ಲಿ ನಡೆದ ಪೋಲೀಸ್ ಗುಂಡಿನ ದಾಳಿ ವಿಚಾರವಾಗಿ, ಪಂಜಾಬ್ ಜನರು ನ್ಯಾಯ ಬಯಸುತ್ತಿದ್ದಾರೆ ಎಂದು ಸಿಧು ಹೇಳಿದ್ದಾರೆ.</p>.<p>‘13 ಅಂಶಗಳ ಕಾರ್ಯಸೂಚಿಯು ಪಕ್ಷದ ಪ್ರಣಾಳಿಕೆಗಿಂತ ಭಿನ್ನವಾಗಿದ್ದು, ದೀರ್ಘಾವಧಿಯಲ್ಲಿ ಕಾರ್ಯಗತಗೊಳಿಸಬೇಕಾದ ಅಂಶಗಳನ್ನು ಒಳಗೊಂಡಿದೆ. ಇದು ಶಿಕ್ಷಣ ತಜ್ಞರು, ನಾಗರಿಕ ಸಮಾಜ, ಪಕ್ಷದ ಕಾರ್ಯಕರ್ತರೊಂದಿಗೆ ಹಲವು ವರ್ಷಗಳ ಸಮಾಲೋಚನೆ ಮತ್ತು ಪ್ರತಿಕ್ರಿಯೆಯ ಬಳಿಕ ರೂಪಿಸಲಾಗಿದೆ’ ಎಂದು ಸಿಧು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡಿಗಡ (ಪಿಟಿಐ):</strong>ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರ ಈಡೇರಿಸಬೇಕಾದ ಜನರ ಆಶೋತ್ತರಗಳನ್ನು ಅದು ಒಳಗೊಂಡಿದೆ.</p>.<p>2022ರ ಪಂಜಾಬ್ ವಿಧಾನಸಭಾ ಚುನಾವಣಾ ಪ್ರಣಾಳಿಕೆಗೂ ಮುನ್ನ, ತಮ್ಮ 13 ಅಂಶಗಳ ಕಾರ್ಯಸೂಚಿಯನ್ನು ಅವರು ಪ್ರಕಟಿಸಿದ್ದಾರೆ. ಈ ಬಗ್ಗೆ ಚರ್ಚಿಸುವುದಕ್ಕಾಗಿ ಸೋನಿಯಾ ಗಾಂಧಿ ಭೇಟಿಗೆ ಅವಕಾಶ ಕೋರಿದ್ದಾರೆ.</p>.<p>ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾದ ಮರುದಿನ ಬರೆದಿರುವ ಪತ್ರದಲ್ಲಿ,‘ಇದು, ಪಂಜಾಬಿನಲ್ಲಿ ಪಕ್ಷದ ಪುನರುಜ್ಜೀವನಕ್ಕೆ ಇರುವ ಕೊನೆಯ ಅವಕಾಶ’ ಎಂದು ಸಿಧು ಉಲ್ಲೇಖಿಸಿದ್ದಾರೆ.</p>.<p>ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿಧು, ತಮ್ಮ ಆತಂಕಗಳನ್ನು ಪರಿಹರಿಸಲಾಗಿದೆ ಎಂದುಅಕ್ಟೋಬರ್ 15ರಂದು ಹೇಳಿದ್ದರು. ಸಿಧು ರಾಜ್ಯ ಘಟಕದ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ ಎಂದು ಪಕ್ಷ ಹೇಳಿತ್ತು. ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ ಈ ನಿರ್ಧಾರಕ್ಕೆ ಬರಲಾಗಿತ್ತು.</p>.<p>2017ರ ಚುನಾವಣಾ ಪ್ರಚಾರದ ವೇಳೆ ತಯಾರಿಸಿದ್ದ 18 ಅಂಶಗಳ ಕಾರ್ಯಸೂಚಿಯ ಅಂಶಗಳು ಹಾಗೂ ರಾಜ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ರಾಜ್ಯ ಸರ್ಕಾರವು ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಸಿಧು ತಮ್ಮ ಪತ್ರದಲ್ಲಿ ಹೇಳಿದ್ದಾರೆ.</p>.<p>2015ರಲ್ಲಿ ಫರೀದ್ಕೋಟ್ನ ಕೋಟ್ಕಾಪುರ ಮತ್ತು ಬೆಹ್ಬಾಲ್ ಕಲಾನ್ನಲ್ಲಿ ನಡೆದ ಪೋಲೀಸ್ ಗುಂಡಿನ ದಾಳಿ ವಿಚಾರವಾಗಿ, ಪಂಜಾಬ್ ಜನರು ನ್ಯಾಯ ಬಯಸುತ್ತಿದ್ದಾರೆ ಎಂದು ಸಿಧು ಹೇಳಿದ್ದಾರೆ.</p>.<p>‘13 ಅಂಶಗಳ ಕಾರ್ಯಸೂಚಿಯು ಪಕ್ಷದ ಪ್ರಣಾಳಿಕೆಗಿಂತ ಭಿನ್ನವಾಗಿದ್ದು, ದೀರ್ಘಾವಧಿಯಲ್ಲಿ ಕಾರ್ಯಗತಗೊಳಿಸಬೇಕಾದ ಅಂಶಗಳನ್ನು ಒಳಗೊಂಡಿದೆ. ಇದು ಶಿಕ್ಷಣ ತಜ್ಞರು, ನಾಗರಿಕ ಸಮಾಜ, ಪಕ್ಷದ ಕಾರ್ಯಕರ್ತರೊಂದಿಗೆ ಹಲವು ವರ್ಷಗಳ ಸಮಾಲೋಚನೆ ಮತ್ತು ಪ್ರತಿಕ್ರಿಯೆಯ ಬಳಿಕ ರೂಪಿಸಲಾಗಿದೆ’ ಎಂದು ಸಿಧು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>