<p><strong>ನವದೆಹಲಿ: </strong>ಭಾರತವು ಸ್ವಾತಂತ್ರ್ಯದ 75 ನೇ ವರ್ಷಕ್ಕೆ ಕಾಲಿಟ್ಟಿದ್ದು, ಸ್ವಾತಂತ್ರ್ಯದ ಅರ್ಥವೇನೆಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೇಶದ ಜನರನ್ನು ಒತ್ತಾಯಿಸಿದ್ದಾರೆ. ಮೂಲಭೂತ ಹಕ್ಕುಗಳು ಮತ್ತು ಸಂವಿಧಾನವನ್ನು ತುಳಿಯುತ್ತಿರುವಾಗ ಮೌನವಾಗಿರುವುದು ‘ಪಾಪ’ ಎಂದು ಅವರು ಹೇಳಿದ್ದಾರೆ.</p>.<p>ದೇಶದ ಪ್ರಜಾಪ್ರಭುತ್ವವನ್ನು ಸರಿಪಡಿಸುವ ಅಗತ್ಯವಿದೆ ಎಂದೂ ಅವರು ಹೇಳಿದ್ದಾರೆ.</p>.<p>‘ನಮ್ಮ ಸಂವಿಧಾನದ ಪಿತಾಮಹರಿಂದ ಜನರಿಗಾಗಿ ರೂಪಿಸಲ್ಪಟ್ಟ ಮೂಲಭೂತ ಹಕ್ಕುಗಳನ್ನು ತುಳಿಯುತ್ತಿರುವಾಗ, ಮೌನವಾಗಿರುವುದು ಪಾಪ’ ಎಂದು ಆಂಗ್ಲ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಸೋನಿಯಾ ಅವರ ಲೇಖನವನ್ನು ಉಲ್ಲೇಖಿಸಿ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.</p>.<p>ಸರ್ಕಾರವು ಸಂಸತ್ತಿನ ಮೇಲೆ ‘ದಾಳಿ’ ಮಾಡಿದಾಗ ಮತ್ತು ಅದರ ಸಂಪ್ರದಾಯಗಳನ್ನು ‘ತುಳಿಯುವ’, ಪ್ರಜಾಪ್ರಭುತ್ವವನ್ನು ಗುಲಾಮಗಿರಿಗೆ ತಳ್ಳುವ, ಸಂವಿಧಾನವನ್ನು ‘ಉಲ್ಲಂಘಿಸುವ’ ಪ್ರಯತ್ನ ಮತ್ತು ಸಾಂಸ್ಥಿಕ ಸ್ವಾಯತ್ತತೆಗೆ ಕಡಿವಾಣ ಹಾಕುವ ಸಂದರ್ಭ ದೇಶದ ಜನರು ಸ್ವಾತಂತ್ರ್ಯದ ಅರ್ಥವೇನೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸೋನಿಯಾ ಹೇಳಿದ್ದಾರೆ.</p>.<p>ಪ್ರಸ್ತುತ ಪತ್ರಕರ್ತರಿಗೆ ಬರೆಯುವ ಸ್ವಾತಂತ್ರ್ಯವಿಲ್ಲ, ಟಿವಿ ಚಾನೆಲ್ಗಳಿಗೆ ಸತ್ಯವನ್ನು ತೋರಿಸುವ ಸ್ವಾತಂತ್ರ್ಯ ಮತ್ತು ಬರಹಗಾರರು ಹಾಗೂ ಚಿಂತಕರು ತಮ್ಮನ್ನು ಅಭಿವ್ಯಕ್ತಿಗೊಳಿಸುವ ಸ್ವಾತಂತ್ರ್ಯವನ್ನು ಹೊಂದಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.</p>.<p>ಸಂಸತ್ ಸದಸ್ಯರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸ್ವಾತಂತ್ರ್ಯವಿಲ್ಲ, ಆಮ್ಲಜನಕ ಕೊರತೆಯ ಬಿಕ್ಕಟ್ಟು ಮತ್ತು ಜಿಎಸ್ಟಿಯಿಂದ ಬಳಲುತ್ತಿರುವ ಜನರಿಗೆ ಮಾತನಾಡುವ ಸ್ವಾತಂತ್ರ್ಯವಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳಿಗೆ ತಮ್ಮ ಹಕ್ಕುಗಳನ್ನು ಪಡೆಯುವ ಸ್ವಾತಂತ್ರ್ಯವಿಲ್ಲ ಎಂದು ಅವರು ಆರೋಪಿಸಿದ್ದಾರೆ.</p>.<p>ಭಾರತದ ಪ್ರಜಾಪ್ರಭುತ್ವಕ್ಕೆ ದುರಸ್ತಿ ಅಗತ್ಯವಿದೆ ಎಂದು ತನ್ನ ಲೇಖನದಲ್ಲಿ ಸೋನಿಯಾ ವಾದಿಸಿದ್ದಾರೆ.</p>.<p>ಕಳೆದ ಕೆಲವು ದಶಕಗಳಲ್ಲಿ ಸಾಧಿಸಿದ ಪ್ರಗತಿಯನ್ನು ಪ್ರಸ್ತುತ ಸರ್ಕಾರದ ಅಡಿಯಲ್ಲಿ ಹಿಮ್ಮುಖಗೊಳಿಸಲಾಗಿದೆ ಎಂದು ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತವು ಸ್ವಾತಂತ್ರ್ಯದ 75 ನೇ ವರ್ಷಕ್ಕೆ ಕಾಲಿಟ್ಟಿದ್ದು, ಸ್ವಾತಂತ್ರ್ಯದ ಅರ್ಥವೇನೆಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೇಶದ ಜನರನ್ನು ಒತ್ತಾಯಿಸಿದ್ದಾರೆ. ಮೂಲಭೂತ ಹಕ್ಕುಗಳು ಮತ್ತು ಸಂವಿಧಾನವನ್ನು ತುಳಿಯುತ್ತಿರುವಾಗ ಮೌನವಾಗಿರುವುದು ‘ಪಾಪ’ ಎಂದು ಅವರು ಹೇಳಿದ್ದಾರೆ.</p>.<p>ದೇಶದ ಪ್ರಜಾಪ್ರಭುತ್ವವನ್ನು ಸರಿಪಡಿಸುವ ಅಗತ್ಯವಿದೆ ಎಂದೂ ಅವರು ಹೇಳಿದ್ದಾರೆ.</p>.<p>‘ನಮ್ಮ ಸಂವಿಧಾನದ ಪಿತಾಮಹರಿಂದ ಜನರಿಗಾಗಿ ರೂಪಿಸಲ್ಪಟ್ಟ ಮೂಲಭೂತ ಹಕ್ಕುಗಳನ್ನು ತುಳಿಯುತ್ತಿರುವಾಗ, ಮೌನವಾಗಿರುವುದು ಪಾಪ’ ಎಂದು ಆಂಗ್ಲ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ಸೋನಿಯಾ ಅವರ ಲೇಖನವನ್ನು ಉಲ್ಲೇಖಿಸಿ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.</p>.<p>ಸರ್ಕಾರವು ಸಂಸತ್ತಿನ ಮೇಲೆ ‘ದಾಳಿ’ ಮಾಡಿದಾಗ ಮತ್ತು ಅದರ ಸಂಪ್ರದಾಯಗಳನ್ನು ‘ತುಳಿಯುವ’, ಪ್ರಜಾಪ್ರಭುತ್ವವನ್ನು ಗುಲಾಮಗಿರಿಗೆ ತಳ್ಳುವ, ಸಂವಿಧಾನವನ್ನು ‘ಉಲ್ಲಂಘಿಸುವ’ ಪ್ರಯತ್ನ ಮತ್ತು ಸಾಂಸ್ಥಿಕ ಸ್ವಾಯತ್ತತೆಗೆ ಕಡಿವಾಣ ಹಾಕುವ ಸಂದರ್ಭ ದೇಶದ ಜನರು ಸ್ವಾತಂತ್ರ್ಯದ ಅರ್ಥವೇನೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸೋನಿಯಾ ಹೇಳಿದ್ದಾರೆ.</p>.<p>ಪ್ರಸ್ತುತ ಪತ್ರಕರ್ತರಿಗೆ ಬರೆಯುವ ಸ್ವಾತಂತ್ರ್ಯವಿಲ್ಲ, ಟಿವಿ ಚಾನೆಲ್ಗಳಿಗೆ ಸತ್ಯವನ್ನು ತೋರಿಸುವ ಸ್ವಾತಂತ್ರ್ಯ ಮತ್ತು ಬರಹಗಾರರು ಹಾಗೂ ಚಿಂತಕರು ತಮ್ಮನ್ನು ಅಭಿವ್ಯಕ್ತಿಗೊಳಿಸುವ ಸ್ವಾತಂತ್ರ್ಯವನ್ನು ಹೊಂದಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.</p>.<p>ಸಂಸತ್ ಸದಸ್ಯರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸ್ವಾತಂತ್ರ್ಯವಿಲ್ಲ, ಆಮ್ಲಜನಕ ಕೊರತೆಯ ಬಿಕ್ಕಟ್ಟು ಮತ್ತು ಜಿಎಸ್ಟಿಯಿಂದ ಬಳಲುತ್ತಿರುವ ಜನರಿಗೆ ಮಾತನಾಡುವ ಸ್ವಾತಂತ್ರ್ಯವಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳಿಗೆ ತಮ್ಮ ಹಕ್ಕುಗಳನ್ನು ಪಡೆಯುವ ಸ್ವಾತಂತ್ರ್ಯವಿಲ್ಲ ಎಂದು ಅವರು ಆರೋಪಿಸಿದ್ದಾರೆ.</p>.<p>ಭಾರತದ ಪ್ರಜಾಪ್ರಭುತ್ವಕ್ಕೆ ದುರಸ್ತಿ ಅಗತ್ಯವಿದೆ ಎಂದು ತನ್ನ ಲೇಖನದಲ್ಲಿ ಸೋನಿಯಾ ವಾದಿಸಿದ್ದಾರೆ.</p>.<p>ಕಳೆದ ಕೆಲವು ದಶಕಗಳಲ್ಲಿ ಸಾಧಿಸಿದ ಪ್ರಗತಿಯನ್ನು ಪ್ರಸ್ತುತ ಸರ್ಕಾರದ ಅಡಿಯಲ್ಲಿ ಹಿಮ್ಮುಖಗೊಳಿಸಲಾಗಿದೆ ಎಂದು ಅವರು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>