ನವದೆಹಲಿ: ರಾಜ್ಯದ ಶಿರಾ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಘೋಷಿಸಲಾಗಿದೆ.
ಶಾಸಕ ಸತ್ಯನಾರಾಯಣ ಅವರ ನಿಧನದಿಂದಾಗಿ ತೆರವಾಗಿದ್ದ ಶಿರಾ ಕ್ಷೇತ್ರ ಹಾಗೂ ಶಾಸಕ ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆಯು ನವೆಂಬರ್ 3ರಂದು ನಡೆಯುವುದಾಗಿ ಕೇಂದ್ರ ಚುನಾವಣೆ ಆಯೋಗ ಘೋಷಿಸಿದೆ.
ಅಕ್ಟೋಬರ್ 9 ರಂದು ಅಧಿಸೂಚನೆ ಹೊರಡಿಸಲಿದ್ದು, ಅಕ್ಟೋಬರ್ 16 ನಾಮಪತ್ರ ಸಲ್ಲಿಕೆಗೆಕೊನೆ ದಿನವಾಗಿದೆ. ಅಕ್ಟೋಬರ್ 17ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.
By-poll on 1 Parliamentary constituency of Bihar & 2 Assembly constituencies of Manipur to be held on Nov 7. By-poll on 54 assembly constituencies in Chhattisgarh, Gujarat, Jharkhand, Karnataka, MP, Nagaland, Odisha, Telangana, UP to be held on Nov 3. Counting of votes on Nov 10. pic.twitter.com/ZdAjXjthti