ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಂವೀರ್‌ ಸಿಂಗ್‌ ವಿರುದ್ಧ ಸುಲಿಗೆ ಆರೋಪ: ತನಿಖೆಗೆ ಎಸ್‌ಐಟಿ ರಚನೆ

Last Updated 7 ಆಗಸ್ಟ್ 2021, 13:27 IST
ಅಕ್ಷರ ಗಾತ್ರ

ಠಾಣೆ: ಮುಂಬೈನ ಮಾಜಿ ಪೊಲೀಸ್‌ ಕಮಿಷನರ್‌ ಪರಂವೀರ್‌ ಸಿಂಗ್‌ ಹಾಗೂ ಇತರ 27 ಜನರ ವಿರುದ್ಧದ ಸುಲಿಗೆ ಆರೋಪಗಳ ಕುರಿತು ತನಿಖೆ ನಡೆಸಲು ಠಾಣೆ ನಗರ ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈ ವರೆಗೆ ಯಾರನ್ನೂ ಬಂಧಿಸಿಲ್ಲಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬಿಲ್ಡರ್‌ ಕೇತನ್ ತನ್ನಾ ಎಂಬುವವರು ನೀಡಿದ ದೂರಿನನ್ವಯ ಇಲ್ಲಿನ ನಗರ ಪೊಲೀಸ್‌ ಠಾಣೆಯಲ್ಲಿ ಕಳೆದ ವಾರ ಪ್ರಕರಣ ದಾಖಲಾಗಿತ್ತು.

ಡಿಸಿಪಿ ದೀಪಕ್‌ ದೇವರಾಜ್‌, ಎಸಿಪಿ ಎನ್‌.ಟಿ.ಕದಂ, ಮಾಜಿ ಪೊಲೀಸ್‌ ಅಧಿಕಾರಿ ಪ್ರದೀಪ್‌ ಶರ್ಮಾ, ಇನ್ಸ್‌ಪೆಕ್ಟರ್‌ ರಾಜಕುಮಾರ್‌ ಕೋಠ್‌ಮಿರೆ, ಗ್ಯಾಂಗ್‌ಸ್ಟರ್‌ ರವಿ ಪೂಜಾರಿ ಹಾಗೂ ನಗರ ಮೂಲದ ಪತ್ರಕರ್ತರೊಬ್ಬರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT