ನಟ ರಜನಿಕಾಂತ್ ಅವರು ರಾಜಕೀಯಕ್ಕೆ ಬರುವರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, 'ಆರೋಗ್ಯ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ತಾವು ರಾಜಕೀಯಕ್ಕೆ ಬರುವುದಿಲ್ಲ ಎಂದು ರಜನಿಕಾಂತ್ ಅವರೇ ಹೇಳಿದ್ದಾರೆ. ಹೀಗಿದ್ದೂ, ಅವರನ್ನು ಹೇಗೆ ರಾಜಕೀಯಕ್ಕೆ ಆಹ್ವಾನಿಸಲಿ,' ಎಂದು ಕಮಲ್ ಮಾಧ್ಯಮಗಳನ್ನು ಪ್ರಶ್ನೆ ಮಾಡಿದರು. ಇತ್ತೀಚೆಗೆ ಕಮಲ್ಹಾಸನ್ ಅವರು ರಜನಿಕಾಂತ್ ಅವರನ್ನು ಪೊಯಸ್ ಗಾರ್ಡನ್ನ ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದ್ದರು.