<p><strong>ಹಾಮ್ರೆನ್, ಅಸ್ಸಾಂ:</strong> ‘ಅಸ್ಸಾಂ–ಮೇಘಾಲಯ ಗಡಿಯ ಮುಕ್ರೋಹ್ನಲ್ಲಿ ಘರ್ಷಣೆಯ ಬಳಿಕ ಇದೀಗ ಶಾಂತಿ ನೆಲೆಸಿದ್ದು, ಉದ್ವಿಗ್ನ ವಾತಾವರಣ ಮುಂದುವರಿದಿದೆ.</p>.<p>‘ಗಲಭೆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.</p>.<p>‘ಘರ್ಷಣೆ ನಡೆದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ವಿಧಿಸಲಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೂ ಭದ್ರತಾ ಪಡೆಯನ್ನು ನಿಯೋಜಿಸಲಾಗುವುದು. ನಮ್ಮ ಹಿರಿಯ ಅಧಿಕಾರಿಗಳು ಪ್ರತಿ ದಿನ ಈ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ’ ಎಂದೂ ಹೇಳಿದರು.</p>.<p>ಮಂಗಳವಾರ ಮುಂಜಾನೆ ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ವಿವಾದಿತ ಗಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಅಸ್ಸಾಂನ ಅರಣ್ಯ ಸಿಬ್ಬಂದಿ ತಡೆದಾಗ ಘರ್ಷಣೆ ಸಂಭವಿಸಿ, ಆರು ಮಂದಿ ಮೃತಪಟ್ಟಿದ್ದರು.</p>.<p>ಗುರುವಾರ ಮೇಘಾಲಯದಲ್ಲಿ ಕನಿಷ್ಠ ಐದು ಸಾಮಾಜಿಕ ಸಂಘಟನೆಗಳು ಶಾಂತಿಯುತ ಪ್ರತಿಭಟನೆ ನಡೆಸಿದ್ದು, ಗಲಭೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಮ್ರೆನ್, ಅಸ್ಸಾಂ:</strong> ‘ಅಸ್ಸಾಂ–ಮೇಘಾಲಯ ಗಡಿಯ ಮುಕ್ರೋಹ್ನಲ್ಲಿ ಘರ್ಷಣೆಯ ಬಳಿಕ ಇದೀಗ ಶಾಂತಿ ನೆಲೆಸಿದ್ದು, ಉದ್ವಿಗ್ನ ವಾತಾವರಣ ಮುಂದುವರಿದಿದೆ.</p>.<p>‘ಗಲಭೆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.</p>.<p>‘ಘರ್ಷಣೆ ನಡೆದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ವಿಧಿಸಲಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೂ ಭದ್ರತಾ ಪಡೆಯನ್ನು ನಿಯೋಜಿಸಲಾಗುವುದು. ನಮ್ಮ ಹಿರಿಯ ಅಧಿಕಾರಿಗಳು ಪ್ರತಿ ದಿನ ಈ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ’ ಎಂದೂ ಹೇಳಿದರು.</p>.<p>ಮಂಗಳವಾರ ಮುಂಜಾನೆ ಪಶ್ಚಿಮ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ವಿವಾದಿತ ಗಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಅಸ್ಸಾಂನ ಅರಣ್ಯ ಸಿಬ್ಬಂದಿ ತಡೆದಾಗ ಘರ್ಷಣೆ ಸಂಭವಿಸಿ, ಆರು ಮಂದಿ ಮೃತಪಟ್ಟಿದ್ದರು.</p>.<p>ಗುರುವಾರ ಮೇಘಾಲಯದಲ್ಲಿ ಕನಿಷ್ಠ ಐದು ಸಾಮಾಜಿಕ ಸಂಘಟನೆಗಳು ಶಾಂತಿಯುತ ಪ್ರತಿಭಟನೆ ನಡೆಸಿದ್ದು, ಗಲಭೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>