ಕೇರಳದಲ್ಲಿ ಭಾರಿ ಭೂಕುಸಿತ ಹಾಗೂ ಪ್ರಾಣಹಾನಿ ಸಂಭವಿಸಿದ್ದು, ಗಾಡ್ಗೀಲ್ ಮತ್ತು ಅವರ ನೇತೃತ್ವದ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯು ಸಿದ್ಧಪಡಿಸಿದ ವರದಿ ಮತ್ತೆ ಚರ್ಚೆಗೆ ಬಂದಿದೆ.2011ರಲ್ಲಿ ಕೇಂದ್ರ ಪರಿಸರ ಸಚಿವಾಲಯಕ್ಕೆ ಸಲ್ಲಿಸಿದ ಗಾಡ್ಗೀಲ್ ವರದಿಯು ಪರಿಸರ ಸೂಕ್ಷ್ಮ ಘಟ್ಟಗಳನ್ನು ಸಂರಕ್ಷಿಸುವ ಕ್ರಮಗಳನ್ನು ಶಿಫಾರಸು ಮಾಡಿತ್ತು.